ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್ವೇರ್ ಬಂದ್ ಮಾಡಲಾಗುತ್ತದೆ.
ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…