ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮ

September 22, 2019
12:00 PM

ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್‍ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ  ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.

ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.

ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ,  ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror