ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?