ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…