Advertisement
Political mirror

ಮತ್ತೆ ಕಗ್ಗಂಟಾದ ಅಡ್ಡಮತದಾನ ಪ್ರಕರಣ ; 10 ದಿನ ಕಳೆದರೂ ರಾಜೀನಾಮೆಯೂ ಇಲ್ಲ…! : ರಾಜೀನಾಮೆ ನೀಡಿದವರು ಹಿಂಪಡೆಯುವ ನಿರ್ಧಾರ ?

Share

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ  ಅಡ್ಡಮತದಾನದ ಪ್ರಕರಣ ಮತ್ತೆ ಕಾವು ಪಡೆದಿದೆ. ಸತ್ಯದ ನೆಲೆಯಲ್ಲೂ ಇತ್ಯರ್ಥವಾಗದ ಪ್ರಕರಣ ಈಗ ರಾಜೀನಾಮೆ ಸೂಚನೆ ನಂತರವೂ ಪ್ರಕರಣ ಬಗೆಹರಿದಿಲ್ಲ…!

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ  ಅಡ್ಡಮತದಾನದ ನಂತರ  ಬಿಜೆಪಿ ಹಾಗೂ ಸಂಘಪರಿವಾರ ಮತ್ತು  ಸಹಕಾರ ಭಾರತಿಯು ಮತದಾನ ಮಾಡಿದ 17 ಮಂದಿಯೂ ರಾಜೀನಾಮೆ ನೀಡಲು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 3 ಮಂದಿ ಅಧಿಕೃತವಾಗಿ ರಾಜೀನಾಮೆ ಪತ್ರ ನೀಡಿದ್ದರು. ಆದರೆ ಉಳಿದ ಯಾರೊಬ್ಬರೂ ರಾಜೀನಾಮೆ ನೀಡದೇ ಇರುವುದು  ಈಗ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಅಡ್ಡಮತದಾನದ ಪ್ರಕರಣವು ಕಾವು ಪಡೆದಿತ್ತು. ಅಡ್ಡಮತದಾನ ಮಾಡಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆಯಲಿಲ್ಲ. ಕೊನೆಗ ಸತ್ಯದ ಮೊರೆ ಹೋದರೂ ಅಡ್ಡಮತದಾನ ಮಾಡಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆಯಲಿಲ್ಲ. ಕೊನೆಗೆ ಡಿಸಿಸಿ ಚುನಾವಣೆಯಲ್ಲಿ ಭಾಗವಹಿಸಿ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಮತ್ತು  ಸಹಕಾರ ಭಾರತಿಯು ಸೂಚನೆ ನೀಡಿತ್ತು. ಇದಕ್ಕಾಗಿ ಹಲವರಿಗೆ ಜವಾಬ್ದಾರಿಯನ್ನೂ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ  ವೆಂಕಟ್ ದಂಬೆಕೋಡಿ, ಪ್ರಸನ್ನ ಎಣ್ಮೂರು ಹಾಗೂ ವಿಷ್ಣು ಭಟ್ ಅಧಿಕೃತವಾಗಿ ರಾಜೀನಾಮೆ ನೀಡಿದ್ದರು. ಉಳಿದ ಕೆಲವರು ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ನೀಡಿದ್ದರೆ ಇನ್ನೂ ಕೆಲವರು ರಾಜೀನಾಮೆ ನೀಡಿಲ್ಲ. ಇದೀಗ 10 ದಿನಗಳ ನಂತರವೂ ಯಾವುದೇ ಕ್ರಮ ಆಗದೇ ಇರುವ ಕಾರಣ ಮತ್ತೆ ಚರ್ಚೆಗೆ ಕಾರಣವಾಗಿದೆ.

ಈ ನಡುವೆ ಮತದಾನದಲ್ಲಿ ಭಾಗವಹಿಸಿರುವ ಕೆಲವರು ಸಭೆ ನಡೆಸಿ ರಾಜೀನಾಮೆ ನೀಡದೇ ಇರಲು ನಿರ್ಧರಿಸಿದ್ದು ಇದಕ್ಕಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಸಂಫಪರಿವಾರದ ಪ್ರಮುಖರ ಸಭೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Advertisement

ರಾಜೀನಾಮೆ ನೀಡಿರುವ ಪ್ರಸನ್ನ ಎಣ್ಮೂರು “ಸುಳ್ಯನ್ಯೂಸ್.ಕಾಂ” ಜೊತೆ ಮಾತನಾಡಿ, ಕ್ರಮಬದ್ಧವಾಗಿ  ರಾಜೀನಾಮೆ ನೀಡಿ 10 ದಿನ ಕಳೆದರೂ ಯಾವುದೇ ಪ್ರತಿಕ್ರಿಯೆ ಯಾರಿಂದರಲೂ ಬಂದಿಲ್ಲ. ಪಕ್ಷದ, ಸಂಘಪರಿವಾರದ ಸೂಚನೆಯಂತೆ ರಾಜೀನಾಮೆ ನೀಡಲಾಗಿದೆ. ಆದರೆ ಯಾವುದೇ ಬೆಳವಣಿಗೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಕಾರಣ ನಾನು ರಾಜೀನಾಮೆ ಪತ್ರ ಹಿಂಪಡೆಯುತ್ತೇನೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಇದೀಗ ಡಿಸಿಸಿ ಅಡ್ಡಮತದಾನ ಪ್ರಕರಣ ಸುಳ್ಯದಲ್ಲಿ ಮತ್ತೆ ಕಾವು ಪಡೆಯುತ್ತಿದೆ. ಸತ್ಯದ ಜಾಗದಲ್ಲಿ ಹೇಳಿದರೂ, ರಾಜೀನಾಮೆ ಸೂಚನೆ ನೀಡಿದರೂ ಅಡ್ಡಮತದಾನ ಪ್ರಕರಣ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಬಿಜೆಪಿ ಕಾರ್ಯಕರ್ತರಲ್ಲಿ ಚರ್ಚೆಗಳು ಹೆಚ್ಚಾಗುತ್ತಿದೆ. ಇದು ಮುಂದೆ ಯಾವ ಪರಿಣಾಮ ಬೀರಲಿದೆ ಎನ್ನುವುದು  ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

54 minutes ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

2 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

12 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

12 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

12 hours ago