Advertisement
Political mirror

ಮತ್ತೆ ಕಗ್ಗಂಟಾದ ಅಡ್ಡಮತದಾನ ಪ್ರಕರಣ ; 10 ದಿನ ಕಳೆದರೂ ರಾಜೀನಾಮೆಯೂ ಇಲ್ಲ…! : ರಾಜೀನಾಮೆ ನೀಡಿದವರು ಹಿಂಪಡೆಯುವ ನಿರ್ಧಾರ ?

Share

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ  ಅಡ್ಡಮತದಾನದ ಪ್ರಕರಣ ಮತ್ತೆ ಕಾವು ಪಡೆದಿದೆ. ಸತ್ಯದ ನೆಲೆಯಲ್ಲೂ ಇತ್ಯರ್ಥವಾಗದ ಪ್ರಕರಣ ಈಗ ರಾಜೀನಾಮೆ ಸೂಚನೆ ನಂತರವೂ ಪ್ರಕರಣ ಬಗೆಹರಿದಿಲ್ಲ…!

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ  ಅಡ್ಡಮತದಾನದ ನಂತರ  ಬಿಜೆಪಿ ಹಾಗೂ ಸಂಘಪರಿವಾರ ಮತ್ತು  ಸಹಕಾರ ಭಾರತಿಯು ಮತದಾನ ಮಾಡಿದ 17 ಮಂದಿಯೂ ರಾಜೀನಾಮೆ ನೀಡಲು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 3 ಮಂದಿ ಅಧಿಕೃತವಾಗಿ ರಾಜೀನಾಮೆ ಪತ್ರ ನೀಡಿದ್ದರು. ಆದರೆ ಉಳಿದ ಯಾರೊಬ್ಬರೂ ರಾಜೀನಾಮೆ ನೀಡದೇ ಇರುವುದು  ಈಗ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಅಡ್ಡಮತದಾನದ ಪ್ರಕರಣವು ಕಾವು ಪಡೆದಿತ್ತು. ಅಡ್ಡಮತದಾನ ಮಾಡಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆಯಲಿಲ್ಲ. ಕೊನೆಗ ಸತ್ಯದ ಮೊರೆ ಹೋದರೂ ಅಡ್ಡಮತದಾನ ಮಾಡಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರೆಯಲಿಲ್ಲ. ಕೊನೆಗೆ ಡಿಸಿಸಿ ಚುನಾವಣೆಯಲ್ಲಿ ಭಾಗವಹಿಸಿ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಮತ್ತು  ಸಹಕಾರ ಭಾರತಿಯು ಸೂಚನೆ ನೀಡಿತ್ತು. ಇದಕ್ಕಾಗಿ ಹಲವರಿಗೆ ಜವಾಬ್ದಾರಿಯನ್ನೂ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ  ವೆಂಕಟ್ ದಂಬೆಕೋಡಿ, ಪ್ರಸನ್ನ ಎಣ್ಮೂರು ಹಾಗೂ ವಿಷ್ಣು ಭಟ್ ಅಧಿಕೃತವಾಗಿ ರಾಜೀನಾಮೆ ನೀಡಿದ್ದರು. ಉಳಿದ ಕೆಲವರು ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ನೀಡಿದ್ದರೆ ಇನ್ನೂ ಕೆಲವರು ರಾಜೀನಾಮೆ ನೀಡಿಲ್ಲ. ಇದೀಗ 10 ದಿನಗಳ ನಂತರವೂ ಯಾವುದೇ ಕ್ರಮ ಆಗದೇ ಇರುವ ಕಾರಣ ಮತ್ತೆ ಚರ್ಚೆಗೆ ಕಾರಣವಾಗಿದೆ.

ಈ ನಡುವೆ ಮತದಾನದಲ್ಲಿ ಭಾಗವಹಿಸಿರುವ ಕೆಲವರು ಸಭೆ ನಡೆಸಿ ರಾಜೀನಾಮೆ ನೀಡದೇ ಇರಲು ನಿರ್ಧರಿಸಿದ್ದು ಇದಕ್ಕಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಸಂಫಪರಿವಾರದ ಪ್ರಮುಖರ ಸಭೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ನೀಡಿರುವ ಪ್ರಸನ್ನ ಎಣ್ಮೂರು “ಸುಳ್ಯನ್ಯೂಸ್.ಕಾಂ” ಜೊತೆ ಮಾತನಾಡಿ, ಕ್ರಮಬದ್ಧವಾಗಿ  ರಾಜೀನಾಮೆ ನೀಡಿ 10 ದಿನ ಕಳೆದರೂ ಯಾವುದೇ ಪ್ರತಿಕ್ರಿಯೆ ಯಾರಿಂದರಲೂ ಬಂದಿಲ್ಲ. ಪಕ್ಷದ, ಸಂಘಪರಿವಾರದ ಸೂಚನೆಯಂತೆ ರಾಜೀನಾಮೆ ನೀಡಲಾಗಿದೆ. ಆದರೆ ಯಾವುದೇ ಬೆಳವಣಿಗೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಕಾರಣ ನಾನು ರಾಜೀನಾಮೆ ಪತ್ರ ಹಿಂಪಡೆಯುತ್ತೇನೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಇದೀಗ ಡಿಸಿಸಿ ಅಡ್ಡಮತದಾನ ಪ್ರಕರಣ ಸುಳ್ಯದಲ್ಲಿ ಮತ್ತೆ ಕಾವು ಪಡೆಯುತ್ತಿದೆ. ಸತ್ಯದ ಜಾಗದಲ್ಲಿ ಹೇಳಿದರೂ, ರಾಜೀನಾಮೆ ಸೂಚನೆ ನೀಡಿದರೂ ಅಡ್ಡಮತದಾನ ಪ್ರಕರಣ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಬಿಜೆಪಿ ಕಾರ್ಯಕರ್ತರಲ್ಲಿ ಚರ್ಚೆಗಳು ಹೆಚ್ಚಾಗುತ್ತಿದೆ. ಇದು ಮುಂದೆ ಯಾವ ಪರಿಣಾಮ ಬೀರಲಿದೆ ಎನ್ನುವುದು  ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

26 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

11 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

16 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago