ಮತ್ತೆ ‘ನಮೋ’ ಆಡಳಿತದ ಮುನ್ಸೂಚನೆಯ ಫಲಿತಾಂಶ

May 23, 2019
10:15 AM

ನವದೆಹಲಿ : ಲೋಕಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಸಂಪೂರ್ಣವಾಗಿ ಹೊರಬೀಳಲಿದೆ. ಈಗಾಗಲೇ ಲಭ್ಯವಾಗುವ ಮುನ್ಸೂಚನೆಯ ಪ್ರಕಾರ ಮತ್ತೆ ಎನ್ ಡಿ ಎ ಅಧಿಕಾರಕ್ಕೇರುವುದು ಹತ್ತಿರವಾಗಿದೆ. ಕೇವಲ ಬಿಜೆಪಿ ಮಾತ್ರವೇ 290 ಸ್ಥಾನಗಳಲ್ಲಿ ಮುನ್ನಡೆ ಹೊಂಡಿದ್ದು  ಮೈತ್ರಿಕೂಟಗಳು ಸೇರಿದಂತೆ 341 ಸ್ಥಾನಗಳಲ್ಲಿ  ಈಗ ಮುನ್ನಡೆ ಹೊಂದಿದೆ. ಹೀಗಾಗಿ ಈಗಿನ ಸೂಚನೆ ಪ್ರಕಾರ “ನಮೋ” ಆಡಳಿತ ಮತ್ತೆ ಪಡೆಯುವುದು  ಸ್ಪಷ್ಟವಾಗುತ್ತಿದೆ.

Advertisement
Advertisement

ಆದರೆ ಕಾಂಗ್ರೆಸ್ 63 ಸ್ಥಾನಗಳಲ್ಲಿ  ಮಾತ್ರವೇ ಮುನ್ನಡೆ ಸಾಧಿಸಿದ್ದು ಮೈತ್ರಿಕೂಟ  ಪಕ್ಷಗಳು ಸೇರಿಸಿ 96 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ.

ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿತ್ತು ಎಂಬುದನ್ನು ಸಾಬೀತುಪಡಿಸಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಧಿಕಾರದತ್ತ ಮುನ್ನಡೆದಿದೆ. ಮತ ಎಣಿಕೆ ಆರಂಭಗೊಂಡು ಎರಡು ಗಂಟೆಯಲ್ಲಿಯೇ ಎನ್.ಡಿ.ಎ ಸ್ಪಷ್ಟ ಬಹುಮತದತ್ತ ಮುನ್ನಡೆದಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಎನ್.ಡಿ.ಎ ಭಾರೀ ಮುನ್ನಡೆ ಪಡೆದಿದೆ. ಕೇರಳದಲ್ಲಿ ಮಾತ್ರ ಯುಪಿಎಗೆ ಮುನ್ನಡೆ ಇದೆ‌. ಕೇರಳದ 20 ಕ್ಷೇತ್ರಗಳಲ್ಲಿ ಕಾಸರಗೋಡು ಸೇರಿ 19 ಕಡೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆಯಲ್ಲಿದೆ. ಒಟ್ಟಿನಲ್ಲಿ ಮೊದಲ ಎರಡು ಗಂಟೆಗಳ ಟ್ರೆಂಡ್ ಗಮನಿಸಿದರೆ ದೇಶದಲ್ಲಿ 350 ಕ್ಕೂ ಹೆಚ್ಚು ಸ್ಥಾನ ಪಡೆದು ಎನ್.ಡಿ.ಎ ಅಧಿಕಾರಕ್ಕೆ ಬರುವ ಸ್ಪಷ್ಟ ಸೂಚನೆ ನೀಡಿದೆ. ಬಿಜೆಪಿ ಮಾತ್ರ ಮ್ಯಾಜಿಕ್ ಸಂಖ್ಯೆ 272ಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ
June 10, 2025
7:19 AM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group