Advertisement
ರಾಷ್ಟ್ರೀಯ

ಮತ್ತೆ ‘ನಮೋ’ ಆಡಳಿತದ ಮುನ್ಸೂಚನೆಯ ಫಲಿತಾಂಶ

Share

ನವದೆಹಲಿ : ಲೋಕಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಸಂಪೂರ್ಣವಾಗಿ ಹೊರಬೀಳಲಿದೆ. ಈಗಾಗಲೇ ಲಭ್ಯವಾಗುವ ಮುನ್ಸೂಚನೆಯ ಪ್ರಕಾರ ಮತ್ತೆ ಎನ್ ಡಿ ಎ ಅಧಿಕಾರಕ್ಕೇರುವುದು ಹತ್ತಿರವಾಗಿದೆ. ಕೇವಲ ಬಿಜೆಪಿ ಮಾತ್ರವೇ 290 ಸ್ಥಾನಗಳಲ್ಲಿ ಮುನ್ನಡೆ ಹೊಂಡಿದ್ದು  ಮೈತ್ರಿಕೂಟಗಳು ಸೇರಿದಂತೆ 341 ಸ್ಥಾನಗಳಲ್ಲಿ  ಈಗ ಮುನ್ನಡೆ ಹೊಂದಿದೆ. ಹೀಗಾಗಿ ಈಗಿನ ಸೂಚನೆ ಪ್ರಕಾರ “ನಮೋ” ಆಡಳಿತ ಮತ್ತೆ ಪಡೆಯುವುದು  ಸ್ಪಷ್ಟವಾಗುತ್ತಿದೆ.

ಆದರೆ ಕಾಂಗ್ರೆಸ್ 63 ಸ್ಥಾನಗಳಲ್ಲಿ  ಮಾತ್ರವೇ ಮುನ್ನಡೆ ಸಾಧಿಸಿದ್ದು ಮೈತ್ರಿಕೂಟ  ಪಕ್ಷಗಳು ಸೇರಿಸಿ 96 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ.

ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿತ್ತು ಎಂಬುದನ್ನು ಸಾಬೀತುಪಡಿಸಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಧಿಕಾರದತ್ತ ಮುನ್ನಡೆದಿದೆ. ಮತ ಎಣಿಕೆ ಆರಂಭಗೊಂಡು ಎರಡು ಗಂಟೆಯಲ್ಲಿಯೇ ಎನ್.ಡಿ.ಎ ಸ್ಪಷ್ಟ ಬಹುಮತದತ್ತ ಮುನ್ನಡೆದಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಎನ್.ಡಿ.ಎ ಭಾರೀ ಮುನ್ನಡೆ ಪಡೆದಿದೆ. ಕೇರಳದಲ್ಲಿ ಮಾತ್ರ ಯುಪಿಎಗೆ ಮುನ್ನಡೆ ಇದೆ‌. ಕೇರಳದ 20 ಕ್ಷೇತ್ರಗಳಲ್ಲಿ ಕಾಸರಗೋಡು ಸೇರಿ 19 ಕಡೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆಯಲ್ಲಿದೆ. ಒಟ್ಟಿನಲ್ಲಿ ಮೊದಲ ಎರಡು ಗಂಟೆಗಳ ಟ್ರೆಂಡ್ ಗಮನಿಸಿದರೆ ದೇಶದಲ್ಲಿ 350 ಕ್ಕೂ ಹೆಚ್ಚು ಸ್ಥಾನ ಪಡೆದು ಎನ್.ಡಿ.ಎ ಅಧಿಕಾರಕ್ಕೆ ಬರುವ ಸ್ಪಷ್ಟ ಸೂಚನೆ ನೀಡಿದೆ. ಬಿಜೆಪಿ ಮಾತ್ರ ಮ್ಯಾಜಿಕ್ ಸಂಖ್ಯೆ 272ಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago