ಮಂಗಳೂರು/ಸುಳ್ಯ: ಕ್ಯಾರ್ ಚಂಡಮಾರುತದ ಬಳಿಕ ಶಾಂತವಾಗಿದ್ದ ಅರಬೀ ಸಮುದ್ರ ಈಗ ಮತ್ತೆ ಇನ್ನೊಂದು ಚಂಡಮಾರುತಕ್ಕೆ ಸಿದ್ಧವಾಗುತ್ತಿದೆ. ಇದು “ಮಹಾ” ಚಂಡಮಾರುತ. ಇದು ಅರಬೀ ಸಮುದ್ರದಲ್ಲಿ ಏಳುತ್ತಿರುವ 4 ನೇ ಚಂಡಮಾರುತ.
ಸದ್ಯ ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಕಂಡುಬಂದಿದೆ. ಇಂದು ಸಂಜೆಯ ವೇಳೆಗೆ ಇದರ ತೀವ್ರತೆ ತಿಳಿಯಲಿದೆ. ಈಗಿನ ನಿರೀಕ್ಷೆ ಪ್ರಕಾರ ಲಕ್ಷದ್ವೀಪದ ಕಡೆಗೆ ಈ ಚಂಡಮಾರುತ ಸಾಗುವ ಲಕ್ಷಣ ಇದೆ. ಈ ಹಿಂದೆ ಉಂಟಾದ ಚಂಡಮಾರುತವು ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಅದೇ ಸಂದರ್ಭ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ತೀರವು ಅಪಾಯದಿಂದ ಪಾರಾಗಿತ್ತು. ಆದರೆ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಯಿತು. ಇದೀಗ ಮತ್ತೆ ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ‘ಮಹಾ’ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಕರ್ನಾಟಕ, ಮತ್ತು ಕೇರಳಗಳಲ್ಲಿ ಮಳೆಯಾಗಲಿದೆ. ತಮಿಳುನಾಡು, ಕೇರಳ, ಮತ್ತು ಕರ್ನಾಟಕ ಕರಾವಳಿಯುದ್ದಕ್ಕೂ ಸಮುದ್ರದಲ್ಲಿ ಅಬ್ಬರ ಕಾಣಬಹುದು ಎಂದು ಹವಾಮಾನ ವಿಶ್ಲೇಷಣೆಯಲ್ಲಿ ನಿರೀಕ್ಷಿಸಲಾಗಿದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…