ಮಂಗಳೂರು/ಸುಳ್ಯ: ಕ್ಯಾರ್ ಚಂಡಮಾರುತದ ಬಳಿಕ ಶಾಂತವಾಗಿದ್ದ ಅರಬೀ ಸಮುದ್ರ ಈಗ ಮತ್ತೆ ಇನ್ನೊಂದು ಚಂಡಮಾರುತಕ್ಕೆ ಸಿದ್ಧವಾಗುತ್ತಿದೆ. ಇದು “ಮಹಾ” ಚಂಡಮಾರುತ. ಇದು ಅರಬೀ ಸಮುದ್ರದಲ್ಲಿ ಏಳುತ್ತಿರುವ 4 ನೇ ಚಂಡಮಾರುತ.
ಸದ್ಯ ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಕಂಡುಬಂದಿದೆ. ಇಂದು ಸಂಜೆಯ ವೇಳೆಗೆ ಇದರ ತೀವ್ರತೆ ತಿಳಿಯಲಿದೆ. ಈಗಿನ ನಿರೀಕ್ಷೆ ಪ್ರಕಾರ ಲಕ್ಷದ್ವೀಪದ ಕಡೆಗೆ ಈ ಚಂಡಮಾರುತ ಸಾಗುವ ಲಕ್ಷಣ ಇದೆ. ಈ ಹಿಂದೆ ಉಂಟಾದ ಚಂಡಮಾರುತವು ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಅದೇ ಸಂದರ್ಭ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ತೀರವು ಅಪಾಯದಿಂದ ಪಾರಾಗಿತ್ತು. ಆದರೆ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಯಿತು. ಇದೀಗ ಮತ್ತೆ ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ‘ಮಹಾ’ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಕರ್ನಾಟಕ, ಮತ್ತು ಕೇರಳಗಳಲ್ಲಿ ಮಳೆಯಾಗಲಿದೆ. ತಮಿಳುನಾಡು, ಕೇರಳ, ಮತ್ತು ಕರ್ನಾಟಕ ಕರಾವಳಿಯುದ್ದಕ್ಕೂ ಸಮುದ್ರದಲ್ಲಿ ಅಬ್ಬರ ಕಾಣಬಹುದು ಎಂದು ಹವಾಮಾನ ವಿಶ್ಲೇಷಣೆಯಲ್ಲಿ ನಿರೀಕ್ಷಿಸಲಾಗಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.