ಮಂಗಳೂರು/ಸುಳ್ಯ: ಕ್ಯಾರ್ ಚಂಡಮಾರುತದ ಬಳಿಕ ಶಾಂತವಾಗಿದ್ದ ಅರಬೀ ಸಮುದ್ರ ಈಗ ಮತ್ತೆ ಇನ್ನೊಂದು ಚಂಡಮಾರುತಕ್ಕೆ ಸಿದ್ಧವಾಗುತ್ತಿದೆ. ಇದು “ಮಹಾ” ಚಂಡಮಾರುತ. ಇದು ಅರಬೀ ಸಮುದ್ರದಲ್ಲಿ ಏಳುತ್ತಿರುವ 4 ನೇ ಚಂಡಮಾರುತ.
ಸದ್ಯ ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಕಂಡುಬಂದಿದೆ. ಇಂದು ಸಂಜೆಯ ವೇಳೆಗೆ ಇದರ ತೀವ್ರತೆ ತಿಳಿಯಲಿದೆ. ಈಗಿನ ನಿರೀಕ್ಷೆ ಪ್ರಕಾರ ಲಕ್ಷದ್ವೀಪದ ಕಡೆಗೆ ಈ ಚಂಡಮಾರುತ ಸಾಗುವ ಲಕ್ಷಣ ಇದೆ. ಈ ಹಿಂದೆ ಉಂಟಾದ ಚಂಡಮಾರುತವು ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಅದೇ ಸಂದರ್ಭ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ತೀರವು ಅಪಾಯದಿಂದ ಪಾರಾಗಿತ್ತು. ಆದರೆ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಯಿತು. ಇದೀಗ ಮತ್ತೆ ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ‘ಮಹಾ’ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಕರ್ನಾಟಕ, ಮತ್ತು ಕೇರಳಗಳಲ್ಲಿ ಮಳೆಯಾಗಲಿದೆ. ತಮಿಳುನಾಡು, ಕೇರಳ, ಮತ್ತು ಕರ್ನಾಟಕ ಕರಾವಳಿಯುದ್ದಕ್ಕೂ ಸಮುದ್ರದಲ್ಲಿ ಅಬ್ಬರ ಕಾಣಬಹುದು ಎಂದು ಹವಾಮಾನ ವಿಶ್ಲೇಷಣೆಯಲ್ಲಿ ನಿರೀಕ್ಷಿಸಲಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…