ಮಂಗಳೂರು/ಸುಳ್ಯ: ಕ್ಯಾರ್ ಚಂಡಮಾರುತದ ಬಳಿಕ ಶಾಂತವಾಗಿದ್ದ ಅರಬೀ ಸಮುದ್ರ ಈಗ ಮತ್ತೆ ಇನ್ನೊಂದು ಚಂಡಮಾರುತಕ್ಕೆ ಸಿದ್ಧವಾಗುತ್ತಿದೆ. ಇದು “ಮಹಾ” ಚಂಡಮಾರುತ. ಇದು ಅರಬೀ ಸಮುದ್ರದಲ್ಲಿ ಏಳುತ್ತಿರುವ 4 ನೇ ಚಂಡಮಾರುತ.
ಸದ್ಯ ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಕಂಡುಬಂದಿದೆ. ಇಂದು ಸಂಜೆಯ ವೇಳೆಗೆ ಇದರ ತೀವ್ರತೆ ತಿಳಿಯಲಿದೆ. ಈಗಿನ ನಿರೀಕ್ಷೆ ಪ್ರಕಾರ ಲಕ್ಷದ್ವೀಪದ ಕಡೆಗೆ ಈ ಚಂಡಮಾರುತ ಸಾಗುವ ಲಕ್ಷಣ ಇದೆ. ಈ ಹಿಂದೆ ಉಂಟಾದ ಚಂಡಮಾರುತವು ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಅದೇ ಸಂದರ್ಭ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ತೀರವು ಅಪಾಯದಿಂದ ಪಾರಾಗಿತ್ತು. ಆದರೆ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಯಿತು. ಇದೀಗ ಮತ್ತೆ ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ‘ಮಹಾ’ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಕರ್ನಾಟಕ, ಮತ್ತು ಕೇರಳಗಳಲ್ಲಿ ಮಳೆಯಾಗಲಿದೆ. ತಮಿಳುನಾಡು, ಕೇರಳ, ಮತ್ತು ಕರ್ನಾಟಕ ಕರಾವಳಿಯುದ್ದಕ್ಕೂ ಸಮುದ್ರದಲ್ಲಿ ಅಬ್ಬರ ಕಾಣಬಹುದು ಎಂದು ಹವಾಮಾನ ವಿಶ್ಲೇಷಣೆಯಲ್ಲಿ ನಿರೀಕ್ಷಿಸಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…