ಮಂಗಳೂರು/ಸುಳ್ಯ: ಕ್ಯಾರ್ ಚಂಡಮಾರುತದ ಬಳಿಕ ಶಾಂತವಾಗಿದ್ದ ಅರಬೀ ಸಮುದ್ರ ಈಗ ಮತ್ತೆ ಇನ್ನೊಂದು ಚಂಡಮಾರುತಕ್ಕೆ ಸಿದ್ಧವಾಗುತ್ತಿದೆ. ಇದು “ಮಹಾ” ಚಂಡಮಾರುತ. ಇದು ಅರಬೀ ಸಮುದ್ರದಲ್ಲಿ ಏಳುತ್ತಿರುವ 4 ನೇ ಚಂಡಮಾರುತ.
ಸದ್ಯ ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಕಂಡುಬಂದಿದೆ. ಇಂದು ಸಂಜೆಯ ವೇಳೆಗೆ ಇದರ ತೀವ್ರತೆ ತಿಳಿಯಲಿದೆ. ಈಗಿನ ನಿರೀಕ್ಷೆ ಪ್ರಕಾರ ಲಕ್ಷದ್ವೀಪದ ಕಡೆಗೆ ಈ ಚಂಡಮಾರುತ ಸಾಗುವ ಲಕ್ಷಣ ಇದೆ. ಈ ಹಿಂದೆ ಉಂಟಾದ ಚಂಡಮಾರುತವು ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಅದೇ ಸಂದರ್ಭ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ತೀರವು ಅಪಾಯದಿಂದ ಪಾರಾಗಿತ್ತು. ಆದರೆ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಯಿತು. ಇದೀಗ ಮತ್ತೆ ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ‘ಮಹಾ’ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಕರ್ನಾಟಕ, ಮತ್ತು ಕೇರಳಗಳಲ್ಲಿ ಮಳೆಯಾಗಲಿದೆ. ತಮಿಳುನಾಡು, ಕೇರಳ, ಮತ್ತು ಕರ್ನಾಟಕ ಕರಾವಳಿಯುದ್ದಕ್ಕೂ ಸಮುದ್ರದಲ್ಲಿ ಅಬ್ಬರ ಕಾಣಬಹುದು ಎಂದು ಹವಾಮಾನ ವಿಶ್ಲೇಷಣೆಯಲ್ಲಿ ನಿರೀಕ್ಷಿಸಲಾಗಿದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…