ಮಂಗಳೂರು/ಸುಳ್ಯ: ಕ್ಯಾರ್ ಚಂಡಮಾರುತದ ಬಳಿಕ ಶಾಂತವಾಗಿದ್ದ ಅರಬೀ ಸಮುದ್ರ ಈಗ ಮತ್ತೆ ಇನ್ನೊಂದು ಚಂಡಮಾರುತಕ್ಕೆ ಸಿದ್ಧವಾಗುತ್ತಿದೆ. ಇದು “ಮಹಾ” ಚಂಡಮಾರುತ. ಇದು ಅರಬೀ ಸಮುದ್ರದಲ್ಲಿ ಏಳುತ್ತಿರುವ 4 ನೇ ಚಂಡಮಾರುತ.
ಸದ್ಯ ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಕಂಡುಬಂದಿದೆ. ಇಂದು ಸಂಜೆಯ ವೇಳೆಗೆ ಇದರ ತೀವ್ರತೆ ತಿಳಿಯಲಿದೆ. ಈಗಿನ ನಿರೀಕ್ಷೆ ಪ್ರಕಾರ ಲಕ್ಷದ್ವೀಪದ ಕಡೆಗೆ ಈ ಚಂಡಮಾರುತ ಸಾಗುವ ಲಕ್ಷಣ ಇದೆ. ಈ ಹಿಂದೆ ಉಂಟಾದ ಚಂಡಮಾರುತವು ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಿತ್ತು. ಅದೇ ಸಂದರ್ಭ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ತೀರವು ಅಪಾಯದಿಂದ ಪಾರಾಗಿತ್ತು. ಆದರೆ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಯಿತು. ಇದೀಗ ಮತ್ತೆ ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ 48 ಗಂಟೆಗಳಲ್ಲಿ ‘ಮಹಾ’ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಕರ್ನಾಟಕ, ಮತ್ತು ಕೇರಳಗಳಲ್ಲಿ ಮಳೆಯಾಗಲಿದೆ. ತಮಿಳುನಾಡು, ಕೇರಳ, ಮತ್ತು ಕರ್ನಾಟಕ ಕರಾವಳಿಯುದ್ದಕ್ಕೂ ಸಮುದ್ರದಲ್ಲಿ ಅಬ್ಬರ ಕಾಣಬಹುದು ಎಂದು ಹವಾಮಾನ ವಿಶ್ಲೇಷಣೆಯಲ್ಲಿ ನಿರೀಕ್ಷಿಸಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…
ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್ ಸ್ಟ್ರೆಸ್ ಹೆಚ್ಚುವ ಸಾಧ್ಯತೆ ಇದೆ ಎಂದು…