ಮತ್ತೊಮ್ಮೆ ಸ್ವಾತಂತ್ರ್ಯ- ಸೆ.10 ರಂದು ಹಕ್ಕೊತ್ತಾಯ ಸಭೆ

August 9, 2019
9:48 AM

ಸುಳ್ಯ: ಸುಳ್ಯ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕ ರೀತಿಯಲ್ಲಿ ಸೇವೆ ಸಿಗದಿರುವ ಬಗ್ಗೆ ಜನ ಜಾಗೃತಿ ಮೂಡಿಸಿ ಹಕ್ಕೊತ್ತಾಯ ಸಭೆ ನಡೆಸಲು ಮಲೆನಾಡ ಜಂಟಿ ಕ್ರಿಯಾ ಸಮಿತಿ ಸುಳ್ಯ ನಿರ್ಧರಿಸಿದೆ. ಮತ್ತೊಮ್ಮೆ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಸೆ.1೦ ರಂದು ಇದನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಕೆ.ಎಲ್.ಪ್ರದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುಳ್ಯ ತಾಲೂಕಿನಲ್ಲಿ ಇರುವ ಹಲವಾರು ಸರ್ಕಾರಿ ಕಚೇರಿಗಳಲ್ಲಿ 2೦೦೦ಗಳಸ್ಟು ಸರ್ಕಾರಿ ನೌಕರರಿದ್ದಾರೆ ಅವರುಗಳೆಲ್ಲ ಸಮರ್ಪಕವಾಗಿ ಸೇವೆ ನೀಡುತ್ತಿದ್ದಾರೆಯೇ ಅಥವಾ ಅವರಿಂದ ಸಮರ್ಪಕವಾಗಿ ಸೇವೆ ಪಡೆಯಲು ಸಾದ್ಯವಾಗುತ್ತಿದೆಯೇ ಎಂಬ ವಿಮರ್ಶೆ ಮಾಡಬೇಕಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗ ಸೇರಿ ಇದನ್ನು ಸರಿ ಮಾಡಬೇಕಾಗಿತ್ತು. ಅವು ವಿಫಲವಾಗಿರುವ ಕಾರಣ ಎಚ್ಚರಿಸುವ ಕೆಲಸ ಜನರೇ ಮಾಡಬೇಕು ಅದಕ್ಕಾಗಿ ಸೆ10 ರಂದು ಹಕ್ಕೊತ್ತಾಯ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದೇವೆ. ಸಮಾಜದ ಎಲ್ಲ ವರ್ಗದ ಜನರೂ ಸಭೆಯಲ್ಲಿ ಭಾಗವಹಿಸಿ ಆಡಳಿತ ಯಂತ್ರ ಸರಿಪಡಿಸಲು ಕಾರಣರಾಗಬೇಕು ಎಂದು ಪ್ರದೀಪ್ ಕುಮಾರ್ ಹೇಳಿದರು.
ಅಶೋಕ್ ಎಡಮಲೆ, ದೀಕ್ಷಿತ್ ಜಯನಗರ, ಸುಳ್ಯಕೋಡಿ ಮಾಧವ ಗೌಡ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror