ಸುಳ್ಯ: ಸುಳ್ಯ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕ ರೀತಿಯಲ್ಲಿ ಸೇವೆ ಸಿಗದಿರುವ ಬಗ್ಗೆ ಜನ ಜಾಗೃತಿ ಮೂಡಿಸಿ ಹಕ್ಕೊತ್ತಾಯ ಸಭೆ ನಡೆಸಲು ಮಲೆನಾಡ ಜಂಟಿ ಕ್ರಿಯಾ ಸಮಿತಿ ಸುಳ್ಯ ನಿರ್ಧರಿಸಿದೆ. ಮತ್ತೊಮ್ಮೆ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಸೆ.1೦ ರಂದು ಇದನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಕೆ.ಎಲ್.ಪ್ರದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುಳ್ಯ ತಾಲೂಕಿನಲ್ಲಿ ಇರುವ ಹಲವಾರು ಸರ್ಕಾರಿ ಕಚೇರಿಗಳಲ್ಲಿ 2೦೦೦ಗಳಸ್ಟು ಸರ್ಕಾರಿ ನೌಕರರಿದ್ದಾರೆ ಅವರುಗಳೆಲ್ಲ ಸಮರ್ಪಕವಾಗಿ ಸೇವೆ ನೀಡುತ್ತಿದ್ದಾರೆಯೇ ಅಥವಾ ಅವರಿಂದ ಸಮರ್ಪಕವಾಗಿ ಸೇವೆ ಪಡೆಯಲು ಸಾದ್ಯವಾಗುತ್ತಿದೆಯೇ ಎಂಬ ವಿಮರ್ಶೆ ಮಾಡಬೇಕಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗ ಸೇರಿ ಇದನ್ನು ಸರಿ ಮಾಡಬೇಕಾಗಿತ್ತು. ಅವು ವಿಫಲವಾಗಿರುವ ಕಾರಣ ಎಚ್ಚರಿಸುವ ಕೆಲಸ ಜನರೇ ಮಾಡಬೇಕು ಅದಕ್ಕಾಗಿ ಸೆ10 ರಂದು ಹಕ್ಕೊತ್ತಾಯ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದೇವೆ. ಸಮಾಜದ ಎಲ್ಲ ವರ್ಗದ ಜನರೂ ಸಭೆಯಲ್ಲಿ ಭಾಗವಹಿಸಿ ಆಡಳಿತ ಯಂತ್ರ ಸರಿಪಡಿಸಲು ಕಾರಣರಾಗಬೇಕು ಎಂದು ಪ್ರದೀಪ್ ಕುಮಾರ್ ಹೇಳಿದರು.
ಅಶೋಕ್ ಎಡಮಲೆ, ದೀಕ್ಷಿತ್ ಜಯನಗರ, ಸುಳ್ಯಕೋಡಿ ಮಾಧವ ಗೌಡ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…