Advertisement
ಜಿಲ್ಲೆ

ಮದೆನಾಡು ಗ್ರಾಮದಲ್ಲಿ 77 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ

Share

ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಹೀಗಾಗಿ  ಸರಕಾರ ವತಿಯಿಂದ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮದೆನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ.

ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸದ್ಯ ಸ್ಥಳೀಯ 77 ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆಯು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಉಪಸ್ಥಿತಿಯಲ್ಲಿ ನಡೆಯಿತು.

ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಸೇರಿದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಒಟ್ಟು 124 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆ ಬೇಕೆಂದು ಮನವಿ ಮಾಡಿದ್ದು. ಆದರೆ ಸ್ಥಳೀಯ 77 ಕುಟುಂಬದವರಿಗೆ ಮನೆಗಳ ಹಂಚಿಕೆ ಮಾಡಲಾಯಿತು. ಇದಕ್ಕೆ ಸಂತ್ರಸ್ತ ಕುಟುಂಬದವರು ಒಪ್ಪಿಗೆ ನೀಡಿದರು.

ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

7 hours ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

7 hours ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

21 hours ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

21 hours ago

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

2 days ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

2 days ago