ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಹೀಗಾಗಿ ಸರಕಾರ ವತಿಯಿಂದ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮದೆನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸದ್ಯ ಸ್ಥಳೀಯ 77 ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆಯು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಉಪಸ್ಥಿತಿಯಲ್ಲಿ ನಡೆಯಿತು.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಸೇರಿದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಒಟ್ಟು 124 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆ ಬೇಕೆಂದು ಮನವಿ ಮಾಡಿದ್ದು. ಆದರೆ ಸ್ಥಳೀಯ 77 ಕುಟುಂಬದವರಿಗೆ ಮನೆಗಳ ಹಂಚಿಕೆ ಮಾಡಲಾಯಿತು. ಇದಕ್ಕೆ ಸಂತ್ರಸ್ತ ಕುಟುಂಬದವರು ಒಪ್ಪಿಗೆ ನೀಡಿದರು.
ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…