ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಹೀಗಾಗಿ ಸರಕಾರ ವತಿಯಿಂದ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮದೆನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸದ್ಯ ಸ್ಥಳೀಯ 77 ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆಯು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಉಪಸ್ಥಿತಿಯಲ್ಲಿ ನಡೆಯಿತು.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಸೇರಿದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಒಟ್ಟು 124 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆ ಬೇಕೆಂದು ಮನವಿ ಮಾಡಿದ್ದು. ಆದರೆ ಸ್ಥಳೀಯ 77 ಕುಟುಂಬದವರಿಗೆ ಮನೆಗಳ ಹಂಚಿಕೆ ಮಾಡಲಾಯಿತು. ಇದಕ್ಕೆ ಸಂತ್ರಸ್ತ ಕುಟುಂಬದವರು ಒಪ್ಪಿಗೆ ನೀಡಿದರು.
ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…