ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಹೀಗಾಗಿ ಸರಕಾರ ವತಿಯಿಂದ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮದೆನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸದ್ಯ ಸ್ಥಳೀಯ 77 ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆಯು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಉಪಸ್ಥಿತಿಯಲ್ಲಿ ನಡೆಯಿತು.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಸೇರಿದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಒಟ್ಟು 124 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆ ಬೇಕೆಂದು ಮನವಿ ಮಾಡಿದ್ದು. ಆದರೆ ಸ್ಥಳೀಯ 77 ಕುಟುಂಬದವರಿಗೆ ಮನೆಗಳ ಹಂಚಿಕೆ ಮಾಡಲಾಯಿತು. ಇದಕ್ಕೆ ಸಂತ್ರಸ್ತ ಕುಟುಂಬದವರು ಒಪ್ಪಿಗೆ ನೀಡಿದರು.
ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…