ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಹೀಗಾಗಿ ಸರಕಾರ ವತಿಯಿಂದ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮದೆನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸದ್ಯ ಸ್ಥಳೀಯ 77 ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆಯು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಉಪಸ್ಥಿತಿಯಲ್ಲಿ ನಡೆಯಿತು.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಸೇರಿದಂತೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಒಟ್ಟು 124 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆ ಬೇಕೆಂದು ಮನವಿ ಮಾಡಿದ್ದು. ಆದರೆ ಸ್ಥಳೀಯ 77 ಕುಟುಂಬದವರಿಗೆ ಮನೆಗಳ ಹಂಚಿಕೆ ಮಾಡಲಾಯಿತು. ಇದಕ್ಕೆ ಸಂತ್ರಸ್ತ ಕುಟುಂಬದವರು ಒಪ್ಪಿಗೆ ನೀಡಿದರು.
ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…