Advertisement
The Rural Mirror ಕಾಳಜಿ

“ಮನೆಗೊಂದು ಇಂಗುಗುಂಡಿ” ಅಭಿಯಾನಕ್ಕೆ ಚಾಲನೆ : ಸುಳ್ಯನ್ಯೂಸ್.ಕಾಂ ನಿಂದ ಸಸಿ ಕೊಡುಗೆ

Share

ಸುಳ್ಯ: ಜಲಸಂರಕ್ಷಣೆಗಾಗಿ   ಮನೆಗೊಂದು  ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು.

ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಸಣ್ಣ ಸಣ್ಣ ಇಂಗುಗುಂಡಿ ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ಸಾರುವ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ,  ತಮ್ಮ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಮಾಡುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 125 ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್. ಪಿ. ಮಾತಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮಹತ್ವವನ್ನು ಹೇಳಿದರು. ಶಾಲಾ ಅಭಿವೃದ್ಧಿ ಮಂಡಲಿ ಸದಸ್ಯ ಕೆ.ಆರ್. ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ  ನಳಿನಿ ಅವರು ನೀರಿಂಗಿಸುವಿಕೆಯ ಅಗತ್ಯವನ್ನು ಹೇಳಿದರು.

ಕಾರ್ಯಕ್ರಮದ ಬಳಿಕ ಸುಳ್ಯನ್ಯೂಸ್.ಕಾಂ ವತಿಯಿಂದ ಶಾಲೆಗೊಂದು ಹಣ್ಣಿನ ಗಿಡ ಎಂಬ ಉದ್ದೇಶದಿಂದ ಎರಡು ಹಣ್ಣಿನ ಗಿಡವನ್ನು  ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ವಿತರಿಸಿದರು.

 

 

ಗಾಂಧಿನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜಲಾಮೃತ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಮಕ್ಕಳ ಮುಖದಲ್ಲಿನ ಮಂದಹಾಸ, ಇಂಗುಗುಂಡಿ ಮಾಡುವತ್ತ ಮಾಡಿದ ಮನಸ್ಸಿನ ಪ್ರತೀಕವೆಂಬಂತೆ ತೋರುತ್ತಿತ್ತು.  ಸರಕಾರಿ ಶಾಲಾ ಮಕ್ಕಳು ಈ ಕಾರ್ಯದಲ್ಲಿ ಸಹಕರಿಸುವ ಭರವಸೆಯಿದೆ. – ಚಂದ್ರಶೇಖರ ದಾಮ್ಲೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

28 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

35 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago