ಸುಳ್ಯ: ಜಲಸಂರಕ್ಷಣೆಗಾಗಿ ಮನೆಗೊಂದು ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು.
ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಸಣ್ಣ ಸಣ್ಣ ಇಂಗುಗುಂಡಿ ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ಸಾರುವ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ, ತಮ್ಮ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಮಾಡುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 125 ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್. ಪಿ. ಮಾತಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮಹತ್ವವನ್ನು ಹೇಳಿದರು. ಶಾಲಾ ಅಭಿವೃದ್ಧಿ ಮಂಡಲಿ ಸದಸ್ಯ ಕೆ.ಆರ್. ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ಅವರು ನೀರಿಂಗಿಸುವಿಕೆಯ ಅಗತ್ಯವನ್ನು ಹೇಳಿದರು.
ಕಾರ್ಯಕ್ರಮದ ಬಳಿಕ ಸುಳ್ಯನ್ಯೂಸ್.ಕಾಂ ವತಿಯಿಂದ ಶಾಲೆಗೊಂದು ಹಣ್ಣಿನ ಗಿಡ ಎಂಬ ಉದ್ದೇಶದಿಂದ ಎರಡು ಹಣ್ಣಿನ ಗಿಡವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ವಿತರಿಸಿದರು.
ಗಾಂಧಿನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜಲಾಮೃತ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಮಕ್ಕಳ ಮುಖದಲ್ಲಿನ ಮಂದಹಾಸ, ಇಂಗುಗುಂಡಿ ಮಾಡುವತ್ತ ಮಾಡಿದ ಮನಸ್ಸಿನ ಪ್ರತೀಕವೆಂಬಂತೆ ತೋರುತ್ತಿತ್ತು. ಸರಕಾರಿ ಶಾಲಾ ಮಕ್ಕಳು ಈ ಕಾರ್ಯದಲ್ಲಿ ಸಹಕರಿಸುವ ಭರವಸೆಯಿದೆ. – ಚಂದ್ರಶೇಖರ ದಾಮ್ಲೆ
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…