Advertisement
The Rural Mirror ಕಾಳಜಿ

“ಮನೆಗೊಂದು ಇಂಗುಗುಂಡಿ” ಅಭಿಯಾನಕ್ಕೆ ಚಾಲನೆ : ಸುಳ್ಯನ್ಯೂಸ್.ಕಾಂ ನಿಂದ ಸಸಿ ಕೊಡುಗೆ

Share

ಸುಳ್ಯ: ಜಲಸಂರಕ್ಷಣೆಗಾಗಿ   ಮನೆಗೊಂದು  ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು.

ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಸಣ್ಣ ಸಣ್ಣ ಇಂಗುಗುಂಡಿ ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ಸಾರುವ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ,  ತಮ್ಮ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಮಾಡುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 125 ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್. ಪಿ. ಮಾತಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮಹತ್ವವನ್ನು ಹೇಳಿದರು. ಶಾಲಾ ಅಭಿವೃದ್ಧಿ ಮಂಡಲಿ ಸದಸ್ಯ ಕೆ.ಆರ್. ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ  ನಳಿನಿ ಅವರು ನೀರಿಂಗಿಸುವಿಕೆಯ ಅಗತ್ಯವನ್ನು ಹೇಳಿದರು.

ಕಾರ್ಯಕ್ರಮದ ಬಳಿಕ ಸುಳ್ಯನ್ಯೂಸ್.ಕಾಂ ವತಿಯಿಂದ ಶಾಲೆಗೊಂದು ಹಣ್ಣಿನ ಗಿಡ ಎಂಬ ಉದ್ದೇಶದಿಂದ ಎರಡು ಹಣ್ಣಿನ ಗಿಡವನ್ನು  ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ವಿತರಿಸಿದರು.

 

 

ಗಾಂಧಿನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜಲಾಮೃತ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಮಕ್ಕಳ ಮುಖದಲ್ಲಿನ ಮಂದಹಾಸ, ಇಂಗುಗುಂಡಿ ಮಾಡುವತ್ತ ಮಾಡಿದ ಮನಸ್ಸಿನ ಪ್ರತೀಕವೆಂಬಂತೆ ತೋರುತ್ತಿತ್ತು.  ಸರಕಾರಿ ಶಾಲಾ ಮಕ್ಕಳು ಈ ಕಾರ್ಯದಲ್ಲಿ ಸಹಕರಿಸುವ ಭರವಸೆಯಿದೆ. – ಚಂದ್ರಶೇಖರ ದಾಮ್ಲೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

6 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

13 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago