Advertisement
The Rural Mirror ಕಾಳಜಿ

“ಮನೆಗೊಂದು ಇಂಗುಗುಂಡಿ” ಅಭಿಯಾನಕ್ಕೆ ಚಾಲನೆ : ಸುಳ್ಯನ್ಯೂಸ್.ಕಾಂ ನಿಂದ ಸಸಿ ಕೊಡುಗೆ

Share

ಸುಳ್ಯ: ಜಲಸಂರಕ್ಷಣೆಗಾಗಿ   ಮನೆಗೊಂದು  ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು.

ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಸಣ್ಣ ಸಣ್ಣ ಇಂಗುಗುಂಡಿ ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ಸಾರುವ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ,  ತಮ್ಮ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಮಾಡುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 125 ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಬಗ್ಗೆ ತಿಳಿಸಿದರು.

Advertisement

ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್. ಪಿ. ಮಾತಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮಹತ್ವವನ್ನು ಹೇಳಿದರು. ಶಾಲಾ ಅಭಿವೃದ್ಧಿ ಮಂಡಲಿ ಸದಸ್ಯ ಕೆ.ಆರ್. ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ  ನಳಿನಿ ಅವರು ನೀರಿಂಗಿಸುವಿಕೆಯ ಅಗತ್ಯವನ್ನು ಹೇಳಿದರು.

ಕಾರ್ಯಕ್ರಮದ ಬಳಿಕ ಸುಳ್ಯನ್ಯೂಸ್.ಕಾಂ ವತಿಯಿಂದ ಶಾಲೆಗೊಂದು ಹಣ್ಣಿನ ಗಿಡ ಎಂಬ ಉದ್ದೇಶದಿಂದ ಎರಡು ಹಣ್ಣಿನ ಗಿಡವನ್ನು  ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ವಿತರಿಸಿದರು.

Advertisement

 

Advertisement

 

ಗಾಂಧಿನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜಲಾಮೃತ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಮಕ್ಕಳ ಮುಖದಲ್ಲಿನ ಮಂದಹಾಸ, ಇಂಗುಗುಂಡಿ ಮಾಡುವತ್ತ ಮಾಡಿದ ಮನಸ್ಸಿನ ಪ್ರತೀಕವೆಂಬಂತೆ ತೋರುತ್ತಿತ್ತು.  ಸರಕಾರಿ ಶಾಲಾ ಮಕ್ಕಳು ಈ ಕಾರ್ಯದಲ್ಲಿ ಸಹಕರಿಸುವ ಭರವಸೆಯಿದೆ. – ಚಂದ್ರಶೇಖರ ದಾಮ್ಲೆ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago