ಸುಳ್ಯ: ಜಲಸಂರಕ್ಷಣೆಗಾಗಿ ಮನೆಗೊಂದು ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು.
ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಸಣ್ಣ ಸಣ್ಣ ಇಂಗುಗುಂಡಿ ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ಸಾರುವ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ, ತಮ್ಮ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಮಾಡುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 125 ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್. ಪಿ. ಮಾತಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮಹತ್ವವನ್ನು ಹೇಳಿದರು. ಶಾಲಾ ಅಭಿವೃದ್ಧಿ ಮಂಡಲಿ ಸದಸ್ಯ ಕೆ.ಆರ್. ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ಅವರು ನೀರಿಂಗಿಸುವಿಕೆಯ ಅಗತ್ಯವನ್ನು ಹೇಳಿದರು.
ಕಾರ್ಯಕ್ರಮದ ಬಳಿಕ ಸುಳ್ಯನ್ಯೂಸ್.ಕಾಂ ವತಿಯಿಂದ ಶಾಲೆಗೊಂದು ಹಣ್ಣಿನ ಗಿಡ ಎಂಬ ಉದ್ದೇಶದಿಂದ ಎರಡು ಹಣ್ಣಿನ ಗಿಡವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ವಿತರಿಸಿದರು.
ಗಾಂಧಿನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜಲಾಮೃತ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಮಕ್ಕಳ ಮುಖದಲ್ಲಿನ ಮಂದಹಾಸ, ಇಂಗುಗುಂಡಿ ಮಾಡುವತ್ತ ಮಾಡಿದ ಮನಸ್ಸಿನ ಪ್ರತೀಕವೆಂಬಂತೆ ತೋರುತ್ತಿತ್ತು. ಸರಕಾರಿ ಶಾಲಾ ಮಕ್ಕಳು ಈ ಕಾರ್ಯದಲ್ಲಿ ಸಹಕರಿಸುವ ಭರವಸೆಯಿದೆ. – ಚಂದ್ರಶೇಖರ ದಾಮ್ಲೆ
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…