(ಕಡತ ಚಿತ್ರ )
ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,
ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…