(ಕಡತ ಚಿತ್ರ )
ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,
ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…