ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,
ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…