(ಕಡತ ಚಿತ್ರ )
ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,
ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…