Advertisement
The Rural Mirror ಕಾಳಜಿ

ಮನೆ ಮನೆಯಲ್ಲೂ ಇಂಗುಗುಂಡಿ “ಜಲಾಮೃತ” ಅಭಿಯಾನಕ್ಕೆ ಚಾಲನೆ

Share

ಸುಳ್ಯ: ಜಲಸಂರಕ್ಷಣೆಗಾಗಿ ಮನೆ ಮನೆಯಲ್ಲಿ ಇಂಗು ಗುಂಡಿ ಅಭಿಯಾನ `ಜಲಾಮೃತ ಯೋಜನೆಯ’ ಉದ್ಘಾಟನಾ ಸಮಾರಂಭ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಿತು.

ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಪ್ರತಿ ಮನೆಯಲ್ಲಿ ಒಂದು ಇಂಗು ಗುಂಡಿಯನ್ನು ಮಕ್ಕಳೇ ನಿರ್ಮಿಸಬೇಕು ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ತಿಳಿಸಬೇಕು ಎಂಬ ದೃಷ್ಠಿಯಿಂದ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತಿದೆ. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಡುವಂತೆ ಮಾಹಿತಿ ನೀಡಿದರು. ಇಂದು ಮಳೆಯು ತೀವ್ರ ಗತಿಯಲ್ಲಿ ಕಡಿಮೆಯಾಗುತಿದೆ. ಮುಂದಿನ ದಿನಗಳಲ್ಲಿ ಮನುಷ್ಯನ ಬದುಕು ಹಸನಾಗಲು ಬರುವ ಮಳೆಯ ನೀರನ್ನು ಉಳಿಸಿಕೊಳ್ಳಬೇಕಾಗಿದೆ. ಅದಕ್ಕಿರುವ ಸರಳ ಉಪಾಯ ಇಂಗು ಗುಂಡಿಗಳು. ಇಂಗು ಗುಂಡಿಗಳ ಮೂಲಕ ಸಾಧ್ಯವಾದಷ್ಟು ನೀರನ್ನು ಭೂಮಿಗೆ ಉಣಿಸಬೇಕಾಗಿದೆ. ಮಕ್ಕಳ ಮೂಲಕ ಪ್ರತಿ ಮನೆಯಲ್ಲಿಯೂ ಇಂಗುಗುಂಡಿಗಳು ನಿರ್ಮಾಣವಾಗಬೇಕು ಎಂದರು.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ. ಮಾತನಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಜಲಸಂರಕ್ಷಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಲಾಭಿವೃದ್ಧಿ ಮಂಡಳಿ ಸದಸ್ಯ ಆರ್.ಕೆ.ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ನೀರಿಂಗಿಸುವಿಕೆಯ ಮಹತ್ವವನ್ನು ವಿವರಿಸಿದರು.

ಸ್ನೇಹ ಶಾಲೆಯ ಮಾದರಿ:
ಸ್ನೇಹ ಶಾಲೆಯಲ್ಲಿ ಈಗಾಗಲೇ ಇಂಗು ಗುಂಡಿಗಳನ್ನು ನಿರ್ಮಾಣ ಮಾಡುವ ಮೂಲಕ ಮಾದರಿಯನ್ನು ಒದಗಿಸಿದೆ. ಶಾಲೆಯ ಐದನೆಯ ತರಗತಿಯಿಂದ 10ನೇ ತರಗತಿಯವರೆಗೆ 105 ವಿದ್ಯಾರ್ಥಿಗಳು ತಮ್ಮ ಮನೆಯ ಸಮೀಪ ಇಂಗು ಗುಂಡಿಯನ್ನು ನಿರ್ಮಿಸಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ನಿರ್ಮಿಸಿದ ಇಂಗು ಗುಂಡಿಯ ಸಮೀಪ ನಿಂತು ಒಂದು ಭಾವಚಿತ್ರವನ್ನು ತೆಗೆದು ಶಾಲೆಗೆ ಕಳಿಸಲಾಗಿತ್ತು. ಪ್ರತಿಯೊಬ್ಬ ವಿದ್ಯಾರ್ಥಿಯ ಭಾವಚಿತ್ರ ಸೇರಿಸಿ ಬೃಹತ್ ಫ್ಲೆಕ್ಸ್ ನಿರ್ಮಿಸಿ ಶಾಲಾ ಆವರಣದಲ್ಲಿ ಅಳವಡಿಸಲಾಗಿದೆ. ಸ್ನೇಹ ಶಾಲೆಯ ಮಕ್ಕಳ ಮಳೆ ಕೊಯ್ಲು ಮಾದರಿಯ ಹಿನ್ನಲೆಯಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಗೂ ವಿಸ್ತರಿಸುವಂತೆ ಮಾಡುವ ಯೋಚನೆ ಡಾ.ಚಂದ್ರಶೇಖರ ದಾಮ್ಲೆ ಅವರದ್ದು. ಇದಕ್ಕೆ ಶಿಕ್ಷಣ ಇಲಾಖೆ ಸಾಥ್ ನೀಡಿ ಇದೀಗ ಅಭಿಯಾನ ಆರಂಭಿಸಲಾಗಿದೆ.

 

ಜಲಾಮೃತ ಯೋಜನೆಯ ಸಹಭಾಗಿತ್ವವನ್ನು ವಹಿಸಿರುವ ಸುಳ್ಯನ್ಯೂಸ್.ಕಾಂ ವತಿಯಿಂದ ಗಾಂಧೀನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‍ಗೆ ಗಿಡವನ್ನು ನೀಡಲಾಯಿತು. ಡಾ.ಚಂದ್ರಶೇಖರ ದಾಮ್ಲೆ ಅವರು ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ಅವರಿಗೆ ಗಿಡವನ್ನು ಹಸ್ತಾಂತರಿಸಿದರು. ಹಸಿರು ಲೋಕ ಸೃಷ್ಠಿ. ಶಾಲೆಗೊಂದು ಹಣ್ಣಿನ ಗಿಡ ಸಂಕಲ್ಪದೊಂದಿಗೆ ಜಲಾಮೃತ ಕಾರ್ಯಕ್ರಮ ನಡೆಯುವ ಪ್ರತಿ ಶಾಲೆಗೆ ಗಿಡ ನೀಡುವ ಯೋಜನೆ ಸುಳ್ಯನ್ಯೂಸ್.ಕಾಂ ತಂಡದ್ದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

9 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

13 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago