ಅನುಕ್ರಮ

ಮನೆ ಮನೆಯಲ್ಲೂ ಗಣೇಶ ಹಬ್ಬದ ಸಂಭ್ರಮ…ಜೈ ಗಣೇಶ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಚೌತಿಯೆಂದರೆ ಎಲ್ಲರ‌ ಮೆಚ್ಚಿನ ಹಬ್ಬ. ಮನೆ ಮನೆಯಲ್ಲೂ ಸಂಭ್ರಮ. ಅದಕ್ಕೂ ಕಾರಣವಿದೆ….
ಗಣಪನೆಂದರೆ ಎಲ್ಲರ‌ ಪ್ರೀತಿಯವ. ಪ್ರಥಮ ವಂದಿತ. ಅವನ ಹುಟ್ಟು ಹಬ್ಬವೆಂದರೆ ಸುಮ್ಮನೆಯೇ. ಎಲ್ಲರೂ ಆಚರಿಸುವುದೇ. ಹಳ್ಳಿಗಳಿರಲಿ , ಪೇಟೆಗಳಿರಲಿ ಎಲ್ಲೆಲ್ಲೂ ಖುಷಿಯೇ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರೂ ಸಂಭ್ರಮ ಪಡುವ ದಿನವೇ ಗಣೇಶ ಚತುರ್ಥಿ.  ದೇವಸ್ಥಾನಗಳಲ್ಲಿ   ಶಾಲಾ ಕಾಲೇಜುಗಳಲ್ಲಿ ,  ಊರು ಕೇರಿಗಳಲ್ಲಿ , ಪೇಟೆ, ಬೀದಿಗಳಲ್ಲಿ ಗಣಪನ ಮೂರ್ತಿಗಳನ್ನಿಟ್ಟು ಪೂಜಿಸಲಾಗುವುದು. ಅವರವರ ಬಕುತಿಗೆ , ಭಾವನೆಗೆ ಹೊಂದುವಂತೆ ಗಣೇಶನ ಹಬ್ಬವನ್ನು ಆಚರಿಸುವುದು ಹಿಂದಿನಿಂದಲೂ ನಡೆದು ಬಂದ ಪದ್ಧತಿ.
ಗಣೇಶನಿಗೆ ಎಲ್ಲರೂ ಪ್ರೀತಿ ಪಾತ್ರರೇ. ಆತನಿಗೆ ಎಲ್ಲೆಡೆಯೂ ಅಭಿಮಾನಿಗಳೇ. ವಿವಿಧ ಭಕ್ಷ್ಯ ಭೋಜನಗಳನ್ನು ಇಷ್ಟ ಪಡುವ ಗಣಪನಿಗೆ ಪ್ರೀತಿಯಿಂದ ಕೊಟ್ಟ ಗರಿಕೆ ಹುಲ್ಲೂ ಇಷ್ಟವೇ.
ಸಂಕಷ್ಟಗಳ ಸರಮಾಲೆಗಳಿದ್ದರೂ ಗಣಪನಲ್ಲಿ ನಿವೇದಿಸಿದರೆ ಸಮಾಧಾನ. ಯಾವುದೇ ಕೆಲಸ ಕಾರ್ಯಗಳು ಆರಂಭಿಸಬೇಕಾದರೆ ಮೊದಲು ಗಣೀಶನನ್ನು ಸ್ಮರಿಸಿ ಮುಂದುವರಿಯುವುದು ನಮ್ಮ ಸಂಪ್ರದಾಯ. ಹೊಸತಾಗಿ ಕಟ್ಟುವ, ಮನೆ ಇರಲಿ, ಉಪನಯನ, ಮದುವೆಯಂತಹ ಶುಭಕಾರ್ಯಗಳೆಲ್ಲವೂ ಆರಂಭ ಗೊಳ್ಳುವುದು ಗಣೇಶನ ಸ್ತುತಿಯಿಂದಲೇ ಆರಂಭ. ಹಾಗಾಗಿ ಹೆಚ್ಚಿನ ಮನೆಗಳಲ್ಲಿ ಪ್ರತಿ ವರುಷವೂ ಗಣಪತಿ ಹವನವನ್ನು ತಪ್ಪದೆ ಮಾಡುತ್ತಾರೆ.
ಬಂದರೆ ಕಷ್ಟಗಳೆಲ್ಲಾ ಒಟ್ಟೊಟ್ಟಿಗೆ ಬಂದು ಬಿಡುತ್ತವೆ. ಗಣೇಶನ ದಯೆಯೊಂದಿದ್ದರೆ ದೊಡ್ಡದಾಗಿ ಬರುವಂತಹುದು ಸಣ್ಣದರಲ್ಲೇ ಮುಗಿದು ಬಿಡುತ್ತದೆ.  ನಂಬಿದವರ ಯಾವತ್ತೂ ಕೈಬಿಡಲಾರ.ಆತನ ಆಶೀರ್ವಾದವೊಂದು ಜೊತೆಗಿದ್ದರೆ  ಯಾವುದೇ ಭಯ ನಮ್ಮ ಬಳಿ ಸುಳಿಯದು. ಜೈ ಗಣೇಶ.
Advertisement
/**/
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

2 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

2 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

2 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

3 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

9 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

16 hours ago