Advertisement
ಅನುಕ್ರಮ

ಮನೆ ಮನೆಯಲ್ಲೂ ಗಣೇಶ ಹಬ್ಬದ ಸಂಭ್ರಮ…ಜೈ ಗಣೇಶ..

Share
ಚೌತಿಯೆಂದರೆ ಎಲ್ಲರ‌ ಮೆಚ್ಚಿನ ಹಬ್ಬ. ಮನೆ ಮನೆಯಲ್ಲೂ ಸಂಭ್ರಮ. ಅದಕ್ಕೂ ಕಾರಣವಿದೆ….
ಗಣಪನೆಂದರೆ ಎಲ್ಲರ‌ ಪ್ರೀತಿಯವ. ಪ್ರಥಮ ವಂದಿತ. ಅವನ ಹುಟ್ಟು ಹಬ್ಬವೆಂದರೆ ಸುಮ್ಮನೆಯೇ. ಎಲ್ಲರೂ ಆಚರಿಸುವುದೇ. ಹಳ್ಳಿಗಳಿರಲಿ , ಪೇಟೆಗಳಿರಲಿ ಎಲ್ಲೆಲ್ಲೂ ಖುಷಿಯೇ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರೂ ಸಂಭ್ರಮ ಪಡುವ ದಿನವೇ ಗಣೇಶ ಚತುರ್ಥಿ.  ದೇವಸ್ಥಾನಗಳಲ್ಲಿ   ಶಾಲಾ ಕಾಲೇಜುಗಳಲ್ಲಿ ,  ಊರು ಕೇರಿಗಳಲ್ಲಿ , ಪೇಟೆ, ಬೀದಿಗಳಲ್ಲಿ ಗಣಪನ ಮೂರ್ತಿಗಳನ್ನಿಟ್ಟು ಪೂಜಿಸಲಾಗುವುದು. ಅವರವರ ಬಕುತಿಗೆ , ಭಾವನೆಗೆ ಹೊಂದುವಂತೆ ಗಣೇಶನ ಹಬ್ಬವನ್ನು ಆಚರಿಸುವುದು ಹಿಂದಿನಿಂದಲೂ ನಡೆದು ಬಂದ ಪದ್ಧತಿ.
ಗಣೇಶನಿಗೆ ಎಲ್ಲರೂ ಪ್ರೀತಿ ಪಾತ್ರರೇ. ಆತನಿಗೆ ಎಲ್ಲೆಡೆಯೂ ಅಭಿಮಾನಿಗಳೇ. ವಿವಿಧ ಭಕ್ಷ್ಯ ಭೋಜನಗಳನ್ನು ಇಷ್ಟ ಪಡುವ ಗಣಪನಿಗೆ ಪ್ರೀತಿಯಿಂದ ಕೊಟ್ಟ ಗರಿಕೆ ಹುಲ್ಲೂ ಇಷ್ಟವೇ.
ಸಂಕಷ್ಟಗಳ ಸರಮಾಲೆಗಳಿದ್ದರೂ ಗಣಪನಲ್ಲಿ ನಿವೇದಿಸಿದರೆ ಸಮಾಧಾನ. ಯಾವುದೇ ಕೆಲಸ ಕಾರ್ಯಗಳು ಆರಂಭಿಸಬೇಕಾದರೆ ಮೊದಲು ಗಣೀಶನನ್ನು ಸ್ಮರಿಸಿ ಮುಂದುವರಿಯುವುದು ನಮ್ಮ ಸಂಪ್ರದಾಯ. ಹೊಸತಾಗಿ ಕಟ್ಟುವ, ಮನೆ ಇರಲಿ, ಉಪನಯನ, ಮದುವೆಯಂತಹ ಶುಭಕಾರ್ಯಗಳೆಲ್ಲವೂ ಆರಂಭ ಗೊಳ್ಳುವುದು ಗಣೇಶನ ಸ್ತುತಿಯಿಂದಲೇ ಆರಂಭ. ಹಾಗಾಗಿ ಹೆಚ್ಚಿನ ಮನೆಗಳಲ್ಲಿ ಪ್ರತಿ ವರುಷವೂ ಗಣಪತಿ ಹವನವನ್ನು ತಪ್ಪದೆ ಮಾಡುತ್ತಾರೆ.
ಬಂದರೆ ಕಷ್ಟಗಳೆಲ್ಲಾ ಒಟ್ಟೊಟ್ಟಿಗೆ ಬಂದು ಬಿಡುತ್ತವೆ. ಗಣೇಶನ ದಯೆಯೊಂದಿದ್ದರೆ ದೊಡ್ಡದಾಗಿ ಬರುವಂತಹುದು ಸಣ್ಣದರಲ್ಲೇ ಮುಗಿದು ಬಿಡುತ್ತದೆ.  ನಂಬಿದವರ ಯಾವತ್ತೂ ಕೈಬಿಡಲಾರ.ಆತನ ಆಶೀರ್ವಾದವೊಂದು ಜೊತೆಗಿದ್ದರೆ  ಯಾವುದೇ ಭಯ ನಮ್ಮ ಬಳಿ ಸುಳಿಯದು. ಜೈ ಗಣೇಶ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

1 hour ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago