Advertisement
ಅನುಕ್ರಮ

ಮನೆ ಮನೆಯಲ್ಲೂ ಗಣೇಶ ಹಬ್ಬದ ಸಂಭ್ರಮ…ಜೈ ಗಣೇಶ..

Share
ಚೌತಿಯೆಂದರೆ ಎಲ್ಲರ‌ ಮೆಚ್ಚಿನ ಹಬ್ಬ. ಮನೆ ಮನೆಯಲ್ಲೂ ಸಂಭ್ರಮ. ಅದಕ್ಕೂ ಕಾರಣವಿದೆ….
ಗಣಪನೆಂದರೆ ಎಲ್ಲರ‌ ಪ್ರೀತಿಯವ. ಪ್ರಥಮ ವಂದಿತ. ಅವನ ಹುಟ್ಟು ಹಬ್ಬವೆಂದರೆ ಸುಮ್ಮನೆಯೇ. ಎಲ್ಲರೂ ಆಚರಿಸುವುದೇ. ಹಳ್ಳಿಗಳಿರಲಿ , ಪೇಟೆಗಳಿರಲಿ ಎಲ್ಲೆಲ್ಲೂ ಖುಷಿಯೇ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರೂ ಸಂಭ್ರಮ ಪಡುವ ದಿನವೇ ಗಣೇಶ ಚತುರ್ಥಿ.  ದೇವಸ್ಥಾನಗಳಲ್ಲಿ   ಶಾಲಾ ಕಾಲೇಜುಗಳಲ್ಲಿ ,  ಊರು ಕೇರಿಗಳಲ್ಲಿ , ಪೇಟೆ, ಬೀದಿಗಳಲ್ಲಿ ಗಣಪನ ಮೂರ್ತಿಗಳನ್ನಿಟ್ಟು ಪೂಜಿಸಲಾಗುವುದು. ಅವರವರ ಬಕುತಿಗೆ , ಭಾವನೆಗೆ ಹೊಂದುವಂತೆ ಗಣೇಶನ ಹಬ್ಬವನ್ನು ಆಚರಿಸುವುದು ಹಿಂದಿನಿಂದಲೂ ನಡೆದು ಬಂದ ಪದ್ಧತಿ.
ಗಣೇಶನಿಗೆ ಎಲ್ಲರೂ ಪ್ರೀತಿ ಪಾತ್ರರೇ. ಆತನಿಗೆ ಎಲ್ಲೆಡೆಯೂ ಅಭಿಮಾನಿಗಳೇ. ವಿವಿಧ ಭಕ್ಷ್ಯ ಭೋಜನಗಳನ್ನು ಇಷ್ಟ ಪಡುವ ಗಣಪನಿಗೆ ಪ್ರೀತಿಯಿಂದ ಕೊಟ್ಟ ಗರಿಕೆ ಹುಲ್ಲೂ ಇಷ್ಟವೇ.
ಸಂಕಷ್ಟಗಳ ಸರಮಾಲೆಗಳಿದ್ದರೂ ಗಣಪನಲ್ಲಿ ನಿವೇದಿಸಿದರೆ ಸಮಾಧಾನ. ಯಾವುದೇ ಕೆಲಸ ಕಾರ್ಯಗಳು ಆರಂಭಿಸಬೇಕಾದರೆ ಮೊದಲು ಗಣೀಶನನ್ನು ಸ್ಮರಿಸಿ ಮುಂದುವರಿಯುವುದು ನಮ್ಮ ಸಂಪ್ರದಾಯ. ಹೊಸತಾಗಿ ಕಟ್ಟುವ, ಮನೆ ಇರಲಿ, ಉಪನಯನ, ಮದುವೆಯಂತಹ ಶುಭಕಾರ್ಯಗಳೆಲ್ಲವೂ ಆರಂಭ ಗೊಳ್ಳುವುದು ಗಣೇಶನ ಸ್ತುತಿಯಿಂದಲೇ ಆರಂಭ. ಹಾಗಾಗಿ ಹೆಚ್ಚಿನ ಮನೆಗಳಲ್ಲಿ ಪ್ರತಿ ವರುಷವೂ ಗಣಪತಿ ಹವನವನ್ನು ತಪ್ಪದೆ ಮಾಡುತ್ತಾರೆ.
ಬಂದರೆ ಕಷ್ಟಗಳೆಲ್ಲಾ ಒಟ್ಟೊಟ್ಟಿಗೆ ಬಂದು ಬಿಡುತ್ತವೆ. ಗಣೇಶನ ದಯೆಯೊಂದಿದ್ದರೆ ದೊಡ್ಡದಾಗಿ ಬರುವಂತಹುದು ಸಣ್ಣದರಲ್ಲೇ ಮುಗಿದು ಬಿಡುತ್ತದೆ.  ನಂಬಿದವರ ಯಾವತ್ತೂ ಕೈಬಿಡಲಾರ.ಆತನ ಆಶೀರ್ವಾದವೊಂದು ಜೊತೆಗಿದ್ದರೆ  ಯಾವುದೇ ಭಯ ನಮ್ಮ ಬಳಿ ಸುಳಿಯದು. ಜೈ ಗಣೇಶ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago