Advertisement
ಅನುಕ್ರಮ

ಮನೆ ಮನೆಯಲ್ಲೂ ಗಣೇಶ ಹಬ್ಬದ ಸಂಭ್ರಮ…ಜೈ ಗಣೇಶ..

Share
ಚೌತಿಯೆಂದರೆ ಎಲ್ಲರ‌ ಮೆಚ್ಚಿನ ಹಬ್ಬ. ಮನೆ ಮನೆಯಲ್ಲೂ ಸಂಭ್ರಮ. ಅದಕ್ಕೂ ಕಾರಣವಿದೆ….
ಗಣಪನೆಂದರೆ ಎಲ್ಲರ‌ ಪ್ರೀತಿಯವ. ಪ್ರಥಮ ವಂದಿತ. ಅವನ ಹುಟ್ಟು ಹಬ್ಬವೆಂದರೆ ಸುಮ್ಮನೆಯೇ. ಎಲ್ಲರೂ ಆಚರಿಸುವುದೇ. ಹಳ್ಳಿಗಳಿರಲಿ , ಪೇಟೆಗಳಿರಲಿ ಎಲ್ಲೆಲ್ಲೂ ಖುಷಿಯೇ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರೂ ಸಂಭ್ರಮ ಪಡುವ ದಿನವೇ ಗಣೇಶ ಚತುರ್ಥಿ.  ದೇವಸ್ಥಾನಗಳಲ್ಲಿ   ಶಾಲಾ ಕಾಲೇಜುಗಳಲ್ಲಿ ,  ಊರು ಕೇರಿಗಳಲ್ಲಿ , ಪೇಟೆ, ಬೀದಿಗಳಲ್ಲಿ ಗಣಪನ ಮೂರ್ತಿಗಳನ್ನಿಟ್ಟು ಪೂಜಿಸಲಾಗುವುದು. ಅವರವರ ಬಕುತಿಗೆ , ಭಾವನೆಗೆ ಹೊಂದುವಂತೆ ಗಣೇಶನ ಹಬ್ಬವನ್ನು ಆಚರಿಸುವುದು ಹಿಂದಿನಿಂದಲೂ ನಡೆದು ಬಂದ ಪದ್ಧತಿ.
ಗಣೇಶನಿಗೆ ಎಲ್ಲರೂ ಪ್ರೀತಿ ಪಾತ್ರರೇ. ಆತನಿಗೆ ಎಲ್ಲೆಡೆಯೂ ಅಭಿಮಾನಿಗಳೇ. ವಿವಿಧ ಭಕ್ಷ್ಯ ಭೋಜನಗಳನ್ನು ಇಷ್ಟ ಪಡುವ ಗಣಪನಿಗೆ ಪ್ರೀತಿಯಿಂದ ಕೊಟ್ಟ ಗರಿಕೆ ಹುಲ್ಲೂ ಇಷ್ಟವೇ.
ಸಂಕಷ್ಟಗಳ ಸರಮಾಲೆಗಳಿದ್ದರೂ ಗಣಪನಲ್ಲಿ ನಿವೇದಿಸಿದರೆ ಸಮಾಧಾನ. ಯಾವುದೇ ಕೆಲಸ ಕಾರ್ಯಗಳು ಆರಂಭಿಸಬೇಕಾದರೆ ಮೊದಲು ಗಣೀಶನನ್ನು ಸ್ಮರಿಸಿ ಮುಂದುವರಿಯುವುದು ನಮ್ಮ ಸಂಪ್ರದಾಯ. ಹೊಸತಾಗಿ ಕಟ್ಟುವ, ಮನೆ ಇರಲಿ, ಉಪನಯನ, ಮದುವೆಯಂತಹ ಶುಭಕಾರ್ಯಗಳೆಲ್ಲವೂ ಆರಂಭ ಗೊಳ್ಳುವುದು ಗಣೇಶನ ಸ್ತುತಿಯಿಂದಲೇ ಆರಂಭ. ಹಾಗಾಗಿ ಹೆಚ್ಚಿನ ಮನೆಗಳಲ್ಲಿ ಪ್ರತಿ ವರುಷವೂ ಗಣಪತಿ ಹವನವನ್ನು ತಪ್ಪದೆ ಮಾಡುತ್ತಾರೆ.
ಬಂದರೆ ಕಷ್ಟಗಳೆಲ್ಲಾ ಒಟ್ಟೊಟ್ಟಿಗೆ ಬಂದು ಬಿಡುತ್ತವೆ. ಗಣೇಶನ ದಯೆಯೊಂದಿದ್ದರೆ ದೊಡ್ಡದಾಗಿ ಬರುವಂತಹುದು ಸಣ್ಣದರಲ್ಲೇ ಮುಗಿದು ಬಿಡುತ್ತದೆ.  ನಂಬಿದವರ ಯಾವತ್ತೂ ಕೈಬಿಡಲಾರ.ಆತನ ಆಶೀರ್ವಾದವೊಂದು ಜೊತೆಗಿದ್ದರೆ  ಯಾವುದೇ ಭಯ ನಮ್ಮ ಬಳಿ ಸುಳಿಯದು. ಜೈ ಗಣೇಶ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

3 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

6 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

12 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

18 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

18 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago