Advertisement
ಸುದ್ದಿಗಳು

ಮರೀಚಿಕೆಯಾದ ನೆರೆ ಪರಿಹಾರ : ಕೂಡಿಗೆ ನಿವಾಸಿಗಳಿಂದ ಮುಖ್ಯಮಂತ್ರಿಗೆ ದೂರು

Share

ಮಡಿಕೇರಿ :ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಹಾರಂಗಿ ಅಣೆಕಟ್ಟೆಯಿಂದ ಹೆಚ್ಚುವರಿ ನೀರು ಹರಿಸಿದ ಪರಿಣಾಮ ಜಲಾವೃತಗೊಂಡ ಕೂಡಿಗೆಯ ಒಂದನೇ ವಾರ್ಡ್‍ನ ಸುಮಾರು 50ಕ್ಕೂ ಅಧಿಕ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡದಿರುವ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿದೆ.

ಕೂಡಿಗೆಯ ಸೇತುವೆ ಸಮೀಪವಿರುವ 50 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಭಾರೀ ನಷ್ಟವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯವರು ಸ್ಥಳ ಪರಿಶೀಲನೆ ಮಾಡಿ ಗ್ರಾಮ ಪಂಚಾಯತ್ ಮೂಲಕ ಸಮಗ್ರ ಮಾಹಿತಿ ಪಡೆದುಕೊಂಡು ತಾತ್ಕಾಲಿಕ ಪರಿಹಾರವಾಗಿ ತಲಾ 3500 ರೂ.ಗಳನ್ನು ನೀಡಿದ್ದರು. ಅಲ್ಲದೆ ಪರಿಶೀಲನೆಯ ನಂತರ ಹೆಚ್ಚುವರಿ ಪರಿಹಾರ ಒದಗಿಸುವುದಾಗಿ ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ತೆರಳಿದ್ದರು.

ಅದರಂತೆ ಗ್ರಾಮ ಪಂಚಾಯತ್ ಕೂಡ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ದಾಖಲಾತಿಗಳನ್ನು ಕಂದಾಯ ಇಲಾಖೆಗೆ ಒದಗಿಸಿತ್ತು. ಆದರೂ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿದ್ದ ಗ್ರಾಮಸ್ಥರು ಈ ಹಿಂದೆ ಗ್ರಾಮ ಪಂಚಾಯ್ತಿ ಎದುರು ಪ್ರತಿಭಟನೆಯನ್ನೂ ನಡೆಸಿದ್ದರಲ್ಲದೆ, ಕಳೆದ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯನ್ನೂ ನೀಡಿದ್ದರು.

ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳು, ಪರಿಹಾರ ನೀಡುವ ಭರವಸೆ ನೀಡುವುದರೊಂದಿಗೆ ಚುನಾವಣೆ ಬಹಿಷ್ಕರಿಸದಂತೆ ಸಂತ್ರಸ್ತರ ಮನವೊಲಿಸಿದ್ದರು.ಆದರೆ ಇದುವರೆಗೂ ಸಂತ್ರಸ್ತರಿಗೆ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.
ಮನವಿ ಪತ್ರ ಸ್ವೀಕರಿಸಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಎರಡು ದಿನಗಳಲ್ಲಿ ಸಂಬಂಧಪಟ್ಟ ಕಡತಗಳನ್ನು ಪರಿಶೀಲಿಸಿ ಶೀಘ್ರವಾಗಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ನೆರೆ ಸಂತ್ರಸ್ತರು ಪರಿಹಾರಕ್ಕಾಗಿ ಇಷ್ಟೆಲ್ಲಾ ಹರಸಾಹಸ ಮಾಡಿದರೂ ಈವರೆಗೆ ಯಾವುದೇ ಪ್ರಯೋಜವಾಗಿಲ್ಲ. ನೆರೆ ಪರಿಹಾರ ದೊರಕಿಸಿಕೊಡುವಲ್ಲಿ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯದ ಬಗ್ಗೆ ಹಾಗೂ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗುವುದು ಎಂದು ನೆರೆ ಸಂತ್ರಸ್ತರಾದ ದೇವಕಿ ಗೋಪಾಲ್ ಕುಮಾರ್, ರಾಜಣ್ಣ, ಸುನೀತಾ, ಕೃಷ್ಣ, ರಾಮಚಂದ್ರ, ಸ್ವಾಮಿ ಸೇರಿದಂತೆ ಐವತ್ತಕ್ಕೂ ಹೆಚ್ಚು ಕುಟುಂಬಸ್ಥರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

6 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

13 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

21 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago