ಸುಳ್ಯ : ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ ಪ್ರಥಮ ಹಂತದ ಗಿಡ ನೆಡುವ ಕಾರ್ಯಕ್ರಮ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಗ್ರಾಪಂ ಸದಸ್ಯ ಪುಷ್ಪಕರ ಮಾವಿನಕಟ್ಟೆ ಚಾಲನೆ ನೀಡಿದರು. ಪರಿಸರ ಪ್ರೇಮಿ ಸತ್ಯನ್ ತಳೂರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ರಕ್ಷಕರಾದ ಸಂದೀಪ್, ಅರಣ್ಯ ವಿಕ್ಷಕರಾದ ವೆಂಕಟ್ರಮಣ ಕುತ್ಯಾಳ, ಹರಿಪ್ರಸಾದ್ ಎಲಿಮಲೆ, ವಿಜಯಕಾಂತ್ ಮಾವಿನಕಟ್ಟೆ, ಲೋಹೀತ್ ಮಾವಿನಕಟ್ಟೆ, ತೇಜಸ್ವಿ ಕಡಪಳ, ರಜನಿಕಾಂತ್ ಉಮ್ಮಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.
ಪ್ರದೀಪ್ ಬೊಳ್ಳೂರು ಸ್ವಾಗತಿಸಿ, ಹರ್ಷೀತ್ ದಾತಡ್ಕ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ ರಾಧಕೃಷ್ಣ ಮಾವಿನಕಟ್ಟೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾನಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಿಡ ನೆಡಲಾಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…