ಜಿಲ್ಲೆ

ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವುದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ ಟಿಂಬರ್ ಸಾಗಾಟಕ್ಕೆ ಅವಕಾಶ ನೀಡಬಾರದೆಂದು ಬೆಟ್ಟತ್ತೂರು ನಿವಾಸಿ, ಮಾಜಿ ಯೋಧ ಕಡ್ಯದ ಎಸ್.ಸುಬ್ಬಯ್ಯ ಒತ್ತಾಯಿಸಿದ್ದಾರೆ.ಸಮಸ್ಯೆಯ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯುವ ಸಲುವಾಗಿ ಮೇ.31 ರಂದು ಐದು ಗ್ರಾಮಗಳ ಗ್ರಾಮಸ್ಥರು ಕಾವೇರಿಸೇನೆ ಸಹಕಾರದೊಂದಿಗೆ ಕೊಳಗದಾಳು ಗ್ರಾಮ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ-ಭಾಗಮಂಡಲ ರಾಜ್ಯ ಹೆದ್ದಾರಿಯ ಚೇರಂಬಾಣೆಯಿಂದ ಕೊಟ್ಟೂರು, ಕೊಳಗದಾಳು, ಬೆಟ್ಟತ್ತೂರು, ಮದೆನಾಡು ಮೂಲಕ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಸುಮಾರು 18ಕಿ.ಮೀ ಉದ್ದದ ರಸ್ತೆ ನಬಾರ್ಡ್ ಯೋಜನೆಯಡಿ ಹಲವು ವರ್ಷಗಳ ಹಿಂದೆ ನಿರ್ಮಾಣವಾಗಿದ್ದು, ಪ್ರಸಕ್ತ ಜಿಲ್ಲಾ ಪಂಚಾಯತ್ ಅಧೀನದಲ್ಲಿದೆ. ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಿಲುಕಿದ ಜೋಡುಪಾಲ, ಕಾಟಕೇರಿ, ಮದೆನಾಡು, ಬೆಟ್ಟತ್ತೂರು ಗ್ರಾಮಗಳ ಸಂತ್ರಸ್ತರನ್ನು ಚೇರಂಬಾಣೆಯ ಸಂತ್ರಸ್ತರ ಕೇಂದ್ರಕ್ಕೆ ಸಾಗಿಸಲು ಇದೇ ರಸ್ತೆಯನ್ನು ಬಳಸಲಾಗಿದೆ. ಇದು ಮಂಗಳೂರು ರಸ್ತೆ ಹಾಗೂ ಭಾಗಮಂಡಲ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯೂ ಆಗಿದೆ ಎಂದು ವಿವರಿಸಿದರು.

ಈ ರಸ್ತೆಯಲ್ಲಿ ಚೇರಂಬಾಣೆಯಿಂದ 6-7 ಕಿ.ಮೀ ದೂರದಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಕೇರಳ ಮೂಲದವರಿಗೆ ಸೇರಿದ ಸುಮಾರು 40ಎಕರೆ ಕಾಫಿ ತೋಟವಿದ್ದು, ಭಾರೀ ಗಾತ್ರದ ನೂರಾರು ಬಳಂಜಿ ಮರಗಳನ್ನು ಕಡಿಯಲಾಗಿದೆ. ಈ ಮರಗಳನ್ನು ಭಾರೀ ವಾಹನ ಹಾಗೂ ಕ್ರೇನ್‍ಗಳ ಮೂಲಕ ಇದೇ ರಸ್ತೆಯಲ್ಲಿ ಸಾಗಿಸಲಾಗುತ್ತಿದ್ದು, ಇದರಿಂದಾಗಿ ರಸ್ತೆ ಮತ್ತಷ್ಟು ಹದಗೆಟ್ಟಿದೆ. ಇದರಿಂದಾಗಿ ಈ ಭಾಗದ ಸುಮಾರು 5 ಗ್ರಾಮಗಳ ಗ್ರಾಮಸ್ಥರು ಸಣ್ಣ ವಾಹನಗಳನ್ನು ಚಾಲಿಸಲು ಮತ್ತು ಕಾಲ್ನಡಿಗೆಯಲ್ಲಿ ಸಾಗಲು ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನ ಸೆಳೆದಿರುವುದಾಗಿ ತಿಳಿಸಿದರು.

ಮೇ 31ರಂದು ಬೆಳಗ್ಗೆ 10 ಗಂಟೆಯಿಂದ ಸುಮಾರು 3 ಗಂಟೆಗಳ ಕಾಲ ಗ್ರಾಮದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಸುಬ್ಬಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಕಾವೇರಿಸೇನೆ ಸಂಚಾಲಕ ಕೆ.ಎ.ರವಿಚಂಗಪ್ಪ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

4 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

9 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

11 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

11 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

11 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

12 hours ago