Advertisement
ಜಿಲ್ಲೆ

ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ

Share

ಮಡಿಕೇರಿ: ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವುದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ ಟಿಂಬರ್ ಸಾಗಾಟಕ್ಕೆ ಅವಕಾಶ ನೀಡಬಾರದೆಂದು ಬೆಟ್ಟತ್ತೂರು ನಿವಾಸಿ, ಮಾಜಿ ಯೋಧ ಕಡ್ಯದ ಎಸ್.ಸುಬ್ಬಯ್ಯ ಒತ್ತಾಯಿಸಿದ್ದಾರೆ.ಸಮಸ್ಯೆಯ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯುವ ಸಲುವಾಗಿ ಮೇ.31 ರಂದು ಐದು ಗ್ರಾಮಗಳ ಗ್ರಾಮಸ್ಥರು ಕಾವೇರಿಸೇನೆ ಸಹಕಾರದೊಂದಿಗೆ ಕೊಳಗದಾಳು ಗ್ರಾಮ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ-ಭಾಗಮಂಡಲ ರಾಜ್ಯ ಹೆದ್ದಾರಿಯ ಚೇರಂಬಾಣೆಯಿಂದ ಕೊಟ್ಟೂರು, ಕೊಳಗದಾಳು, ಬೆಟ್ಟತ್ತೂರು, ಮದೆನಾಡು ಮೂಲಕ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಸುಮಾರು 18ಕಿ.ಮೀ ಉದ್ದದ ರಸ್ತೆ ನಬಾರ್ಡ್ ಯೋಜನೆಯಡಿ ಹಲವು ವರ್ಷಗಳ ಹಿಂದೆ ನಿರ್ಮಾಣವಾಗಿದ್ದು, ಪ್ರಸಕ್ತ ಜಿಲ್ಲಾ ಪಂಚಾಯತ್ ಅಧೀನದಲ್ಲಿದೆ. ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಿಲುಕಿದ ಜೋಡುಪಾಲ, ಕಾಟಕೇರಿ, ಮದೆನಾಡು, ಬೆಟ್ಟತ್ತೂರು ಗ್ರಾಮಗಳ ಸಂತ್ರಸ್ತರನ್ನು ಚೇರಂಬಾಣೆಯ ಸಂತ್ರಸ್ತರ ಕೇಂದ್ರಕ್ಕೆ ಸಾಗಿಸಲು ಇದೇ ರಸ್ತೆಯನ್ನು ಬಳಸಲಾಗಿದೆ. ಇದು ಮಂಗಳೂರು ರಸ್ತೆ ಹಾಗೂ ಭಾಗಮಂಡಲ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯೂ ಆಗಿದೆ ಎಂದು ವಿವರಿಸಿದರು.

ಈ ರಸ್ತೆಯಲ್ಲಿ ಚೇರಂಬಾಣೆಯಿಂದ 6-7 ಕಿ.ಮೀ ದೂರದಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಕೇರಳ ಮೂಲದವರಿಗೆ ಸೇರಿದ ಸುಮಾರು 40ಎಕರೆ ಕಾಫಿ ತೋಟವಿದ್ದು, ಭಾರೀ ಗಾತ್ರದ ನೂರಾರು ಬಳಂಜಿ ಮರಗಳನ್ನು ಕಡಿಯಲಾಗಿದೆ. ಈ ಮರಗಳನ್ನು ಭಾರೀ ವಾಹನ ಹಾಗೂ ಕ್ರೇನ್‍ಗಳ ಮೂಲಕ ಇದೇ ರಸ್ತೆಯಲ್ಲಿ ಸಾಗಿಸಲಾಗುತ್ತಿದ್ದು, ಇದರಿಂದಾಗಿ ರಸ್ತೆ ಮತ್ತಷ್ಟು ಹದಗೆಟ್ಟಿದೆ. ಇದರಿಂದಾಗಿ ಈ ಭಾಗದ ಸುಮಾರು 5 ಗ್ರಾಮಗಳ ಗ್ರಾಮಸ್ಥರು ಸಣ್ಣ ವಾಹನಗಳನ್ನು ಚಾಲಿಸಲು ಮತ್ತು ಕಾಲ್ನಡಿಗೆಯಲ್ಲಿ ಸಾಗಲು ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನ ಸೆಳೆದಿರುವುದಾಗಿ ತಿಳಿಸಿದರು.

ಮೇ 31ರಂದು ಬೆಳಗ್ಗೆ 10 ಗಂಟೆಯಿಂದ ಸುಮಾರು 3 ಗಂಟೆಗಳ ಕಾಲ ಗ್ರಾಮದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಸುಬ್ಬಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಕಾವೇರಿಸೇನೆ ಸಂಚಾಲಕ ಕೆ.ಎ.ರವಿಚಂಗಪ್ಪ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago