Advertisement
ಜಿಲ್ಲೆ

ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ

Share

ಮಡಿಕೇರಿ: ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವುದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ ಟಿಂಬರ್ ಸಾಗಾಟಕ್ಕೆ ಅವಕಾಶ ನೀಡಬಾರದೆಂದು ಬೆಟ್ಟತ್ತೂರು ನಿವಾಸಿ, ಮಾಜಿ ಯೋಧ ಕಡ್ಯದ ಎಸ್.ಸುಬ್ಬಯ್ಯ ಒತ್ತಾಯಿಸಿದ್ದಾರೆ.ಸಮಸ್ಯೆಯ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯುವ ಸಲುವಾಗಿ ಮೇ.31 ರಂದು ಐದು ಗ್ರಾಮಗಳ ಗ್ರಾಮಸ್ಥರು ಕಾವೇರಿಸೇನೆ ಸಹಕಾರದೊಂದಿಗೆ ಕೊಳಗದಾಳು ಗ್ರಾಮ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ-ಭಾಗಮಂಡಲ ರಾಜ್ಯ ಹೆದ್ದಾರಿಯ ಚೇರಂಬಾಣೆಯಿಂದ ಕೊಟ್ಟೂರು, ಕೊಳಗದಾಳು, ಬೆಟ್ಟತ್ತೂರು, ಮದೆನಾಡು ಮೂಲಕ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಸುಮಾರು 18ಕಿ.ಮೀ ಉದ್ದದ ರಸ್ತೆ ನಬಾರ್ಡ್ ಯೋಜನೆಯಡಿ ಹಲವು ವರ್ಷಗಳ ಹಿಂದೆ ನಿರ್ಮಾಣವಾಗಿದ್ದು, ಪ್ರಸಕ್ತ ಜಿಲ್ಲಾ ಪಂಚಾಯತ್ ಅಧೀನದಲ್ಲಿದೆ. ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಿಲುಕಿದ ಜೋಡುಪಾಲ, ಕಾಟಕೇರಿ, ಮದೆನಾಡು, ಬೆಟ್ಟತ್ತೂರು ಗ್ರಾಮಗಳ ಸಂತ್ರಸ್ತರನ್ನು ಚೇರಂಬಾಣೆಯ ಸಂತ್ರಸ್ತರ ಕೇಂದ್ರಕ್ಕೆ ಸಾಗಿಸಲು ಇದೇ ರಸ್ತೆಯನ್ನು ಬಳಸಲಾಗಿದೆ. ಇದು ಮಂಗಳೂರು ರಸ್ತೆ ಹಾಗೂ ಭಾಗಮಂಡಲ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯೂ ಆಗಿದೆ ಎಂದು ವಿವರಿಸಿದರು.

ಈ ರಸ್ತೆಯಲ್ಲಿ ಚೇರಂಬಾಣೆಯಿಂದ 6-7 ಕಿ.ಮೀ ದೂರದಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಕೇರಳ ಮೂಲದವರಿಗೆ ಸೇರಿದ ಸುಮಾರು 40ಎಕರೆ ಕಾಫಿ ತೋಟವಿದ್ದು, ಭಾರೀ ಗಾತ್ರದ ನೂರಾರು ಬಳಂಜಿ ಮರಗಳನ್ನು ಕಡಿಯಲಾಗಿದೆ. ಈ ಮರಗಳನ್ನು ಭಾರೀ ವಾಹನ ಹಾಗೂ ಕ್ರೇನ್‍ಗಳ ಮೂಲಕ ಇದೇ ರಸ್ತೆಯಲ್ಲಿ ಸಾಗಿಸಲಾಗುತ್ತಿದ್ದು, ಇದರಿಂದಾಗಿ ರಸ್ತೆ ಮತ್ತಷ್ಟು ಹದಗೆಟ್ಟಿದೆ. ಇದರಿಂದಾಗಿ ಈ ಭಾಗದ ಸುಮಾರು 5 ಗ್ರಾಮಗಳ ಗ್ರಾಮಸ್ಥರು ಸಣ್ಣ ವಾಹನಗಳನ್ನು ಚಾಲಿಸಲು ಮತ್ತು ಕಾಲ್ನಡಿಗೆಯಲ್ಲಿ ಸಾಗಲು ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನ ಸೆಳೆದಿರುವುದಾಗಿ ತಿಳಿಸಿದರು.

ಮೇ 31ರಂದು ಬೆಳಗ್ಗೆ 10 ಗಂಟೆಯಿಂದ ಸುಮಾರು 3 ಗಂಟೆಗಳ ಕಾಲ ಗ್ರಾಮದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಸುಬ್ಬಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಕಾವೇರಿಸೇನೆ ಸಂಚಾಲಕ ಕೆ.ಎ.ರವಿಚಂಗಪ್ಪ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

11 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

14 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

14 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

18 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

18 hours ago