ಮರ ಸಾಗಾಟದಿಂದ ರಸ್ತೆ ಹಾನಿ : ಲಾರಿಗೆ ಗ್ರಾಮಸ್ಥರ ತಡೆ

July 29, 2019
10:00 AM

ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು  ಲಾರಿ ತಡೆದು ಪಂಚಾಯತ್‍ಗೆ ಮಾಹಿತಿ ನೀಡಿದ್ದರು.

Advertisement

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು  ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group