ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…