ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…