ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…