ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…