ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…