ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…