ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…