ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…