ಸುದ್ದಿಗಳು

ಮಲೆಯಾಳ-ಐನಕಿದು ರಸ್ತೆ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ : ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲಾಗಿದ್ದ ಮಲೆಯಾಳ-ಐನಕಿದು ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಜು.11 ರಿಂದ ಅವಕಾಶ ನೀಡಲಾಗಿದೆ. ಸುಳ್ಯ ತಹಶೀಲ್ದಾರ್ ಅವರ ಸೂಚನೆಯಂತೆ ಈ ಕ್ರಮವಹಿಸಲಾಗಿದೆ.

Advertisement
Advertisement

ಸುಬ್ರಹ್ಮಣ್ಯ ಭಾಗದಿಂದ ಐನಕಿದು ಸೇರಿದಂತೆ ಹಲವು ಭಾಗಗಳಿಗೆ ಸಂಪರ್ಕಿಸುವ ಮಲೆಯಾಳ-ಐನಕಿದು ರಸ್ತೆಯಲ್ಲಿ ಎರಡು ಕಡೆ ಕಾಂಕ್ರೀಟ್ ಕಾಮಗಾರಿ ನಡೆಸಲೆಂದು ಕಳೆದ ಕೆಲ ದಿನಗಳಿಂದ ವಾಹನಗಳ ಓಡಾಟವನ್ನು ನಿಷೇದಿಸಲಾಗಿತ್ತು. ಇದೇ ರಸ್ತೆಯ ಪಕ್ಕ ಬದಲಿ ಮಾರ್ಗ ನಿರ್ಮಿಸಿ ಕನಿಷ್ಠ ದ್ವಿಚಕ್ರ ವಾಹನ ಓಡಾಟಕ್ಕೂ ಅವಕಾಶ ಮಾಡಿಕೊಡದೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದ ಸಾರಿಗೆ ಬಸ್ ಸಹಿತ ಲಘು ಘನ ವಾಹನಗಳ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಈ ಮಾರ್ಗವಾಗಿ ತೆರಳಲು ಸಾಧ್ಯವಾಗದೆ ತೊಂದರೆಗೆ ಒಳಗಾಗಿದ್ದರು. ಐನಕಿದು, ಕೆದಿಲ ಸೇರಿದಂತೆ ಹರಿಹರ, ಬಾಳುಗೋಡು, ಕಲ್ಮಕಾರು, ಕೊಲ್ಲಮೊಗ್ರು ಭಾಗದವರಿಗೆ ಸುಬ್ರಹ್ಮಣ್ಯ ಭಾಗದಿಂದ ತೆರಳಲು ಅಡಚಣೆಯಾಗಿತ್ತು. ಶಾಲಾ ವಿದ್ಯಾರ್ಥಿಗಳು ಕೂಡ ಸುತ್ತು ಬಳಸಿ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು.

ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ತೊಂದರೆ ಆಗುವುದಲ್ಲದೆ ತುರ್ತು ಅಗತ್ಯಕ್ಕೆ ದ್ವಿಚಕ್ರ ವಾಹನ ಸವಾರರರಿಗೂ ಇಲ್ಲಿ ತೆರಳಲು ಪರ್ಯಾಯ ವ್ಯವಸ್ಥೆ ಮಾಡದೇ ಇರುವ ಕುರಿತು ಸ್ಥಳೀಯರು ಅಸಮಧಾನಗೊಂಡಿದ್ದರು. ಈ ವಿಚಾರ ಸುಳ್ಯ ತಹಶೀಲ್ದಾರ್ ಅವರ ಗಮನಕ್ಕೆ ಬಂದಿತ್ತು. ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರು ಕೂಡಲೇ ಸ್ಪಂದಿಸಿ ಸಂಬಂದಿಸಿದ ಇಲಾಖೆಯ ಇಂಜಿನೀಯರ್ ಅವರಿಗೆ ಸಂಚಾರ ವ್ಯತ್ಯಾಯ ಸರಿಪಡಿಸುವಂತೆ ಸೂಚಿಸಿದ್ದರು. ಅದರಂತೆ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಬಸ್ ಸಹಿತ ಘನ ವಾಹನಗಳ ಓಡಾಟಕ್ಕೂ ಸಿದ್ಧವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

12 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

12 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

12 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

12 hours ago